image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿಯಿಂದ ಟೀಂ ಇಂಡಿಯಾ ಆಟಗಾರರಿಗೆ ಹೊಸ ನಿಯಮ ಜಾರಿ...!

ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿಯಿಂದ ಟೀಂ ಇಂಡಿಯಾ ಆಟಗಾರರಿಗೆ ಹೊಸ ನಿಯಮ ಜಾರಿ...!

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ ಭಾರತ ಹೀನಾಯ ಸೋಲನಭವಿಸಿತು. ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದ ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ನಿಂದಲೂ ಹೊರಬಿದ್ದಿದೆ. ಇದಕ್ಕೆ ಬ್ಯಾಟಿಂಗ್​ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು.

ಟೀಂ ಇಂಡಿಯಾದ ಈ ಸೋಲಿನ ಬೆನ್ನಲ್ಲೆ ಬಿಸಿಸಿಐ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಈ ಹಿನ್ನೆಲೆ ಇತ್ತೀಚೆಗೆ ನಡೆದ ಬಿಸಿಸಿಐ ಪರಿಶೀಲನಾ ಸಭೆಯಲ್ಲಿ ಕೆಲ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಅದರಲ್ಲಿ ಕ್ರಿಕೆಟಿಗರ ಕುಟುಂಬಕ್ಕೆ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸುವ ಬಗ್ಗೆಯೂ ನಿರ್ಧರಿಸಲಾಗಿದೆ. ಜೊತೆಗೆ ಕೋಚ್​ ಗೌತಮ್​ ಗಂಭೀರ್​ಗೆ ನೀಡಲಾಗಿದ್ದ ಕೆಲ ಸೌಲಭ್ಯಗಳಿಗೆ ಕತ್ತರಿ ಬೀಳಲಿದೆ ಎಂದು ಕ್ರಿಕೆಟ್​ ಮೂಲಗಳು ಬಹಿರಂಗ ಪಡಿಸಿವೆ.

ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಈ ಹಿಂದೆ ಯಾರಿಗೂ ನೀಡದ ಅಧಿಕಾರ ಮತ್ತು ಸ್ವಾತಂತ್ರ್ಯಗಳನ್ನು ಬಿಸಿಸಿಐ ನೀಡಿತ್ತು. ತಂಡದ ಆಯ್ಕೆಯ ಜೊತೆಗೆ, ಸಹಾಯಕ ತರಬೇತುದಾರರನ್ನು ನೇಮಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಇಷ್ಟೆಲ್ಲ ಮಾಡಿದರೂ ಟೀಂ ಇಂಡಿಯಾದಿಂದ ನಿರೀಕ್ಷಿಸಿದ ಫಲಿತಾಂಶ ಸಾಧಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಗಂಭೀರ್​ಗೆ ನೀಡಲಾಗಿದ್ದ ಸ್ವಾತಂತ್ರ್ಯವನ್ನು ಕಡಿತಗೊಳಿಸಲು ಮುಂದಾಗಿದೆ.

ಕುಟುಂಬ ಸೌಲಭ್ಯ ಕಟ್: ಹಿರಿಯ ಆಟಗಾರರಾದ ರೋಹಿತ್ ಮತ್ತು ವಿರಾಟ್ ಕೊಹ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಈ ವಿಷಯದಲ್ಲಿ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ ಎಂದು ತೋರುತ್ತದೆ. 2019 ರಿಂದ, ಭಾರತದ ಹಿರಿಯ ಆಟಗಾರರು ಕ್ರಿಕೆಟ್​ ಪಂದ್ಯಗಳಿಗಾಗಿ ವಿದೇಶಿ ಪ್ರವಾಸಕ್ಕೆ ತೆರಳಿದರೆ ಕುಟುಂಬ ಸದಸ್ಯರು (ಪತ್ನಿ, ಮಕ್ಕಳು) ಅವರೊಂದಿಗೆ ಹೋಗಲು ಅನುಮತಿ ನೀಡಿತ್ತು.

Category
ಕರಾವಳಿ ತರಂಗಿಣಿ