image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಭಾರೀ ವಿನಾಯಿತಿ : ಬಜೆಟ್ ನಲ್ಲಿ ಕ್ರೀಡೆಗೆ ಪ್ರೋತ್ಸಾಹ ಧನ ಮೀಸಲು

ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಭಾರೀ ವಿನಾಯಿತಿ : ಬಜೆಟ್ ನಲ್ಲಿ ಕ್ರೀಡೆಗೆ ಪ್ರೋತ್ಸಾಹ ಧನ ಮೀಸಲು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ  ಇಂದು ದಾಖಲೆಯ 16ನೇ ಬಜೆಟ್​ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಎಲ್ಲಾ ವಲಯಗಳಿಗೆ ಒತ್ತುಕೊಟ್ಟಿರುವ ಸಿಎಂ ಕ್ರೀಡಾಪಟುಗಳಿಗೆ ಬಂಪರ್​ ಗಿಫ್ಟ್​ ಘೋಷಿಸಿದ್ದಾರೆ.

ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ - 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ ಪ್ರಸಕ್ತ ವರ್ಷ 6 ಕೋಟಿ ರೂ. ಒದಗಿಸುವುದಾಗಿ ಬಜೆಟ್​ನಲ್ಲಿ ಮಂಡಿಸಿದ್ದಾರೆ.

ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್​: ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಅಥವಾ ತರಬೇತಿ ಪಡೆಯುವ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಿದ್ಯಾರ್ಥಿಗಳಿಗೆ ವಾರ್ಷಿಕ ಹಾಜರಾತಿಯಲ್ಲಿ ಶೇ.15ರಷ್ಟು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ.ವರೆಗೆ ನೆರವು.

ಬೆಂ.ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ ವೆಚ್ಚ.ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ವೆಚ್ಚ.

ಆರು ಕೋಟಿ ರೂ. ಅನುದಾನದಲ್ಲಿ ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ.

ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್​ಗಳ ನಿರ್ಮಾಣ. ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಭ ಕ್ರೀಡೆಗಳಿಗೆ ಉತ್ತೇಜನ ನೀಡಲು ಕ್ರಮ.

ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವರ್ಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 2 ಕೋಟಿ ರೂ ಒದಗಿಸಲು ಕ್ರಮ.

3 ಕೋಟಿ ರೂ ವೆಚ್ಚದಲ್ಲಿ ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣ. 10 ಕೋಟಿ ರೂ. ವೆಚ್ಚದಲ್ಲಿ ಯಾದಗಿರಿಯ ಶಹಾಪುರದಲ್ಲಿ ಕ್ರೀಡಾ ವಸತಿ ಶಾಲೆ ನಿರ್ಮಾಣ. 7 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳ ಸ್ಥಾಪನೆ.

ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ವ್ಯವಸ್ಥೆಗಳನ್ನೊಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಮೇಲ್ದರ್ಜೆಗೇರಿಸಲು ಕ್ರಮ.

ಚಾಮರಾಜನಗರದಲ್ಲಿ ಒಲಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಬೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ ವೆಚ್ಚ. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ.ಗಳಿಗೆ ಹೆಚ್ಚಳ. ಒಲಂಪಿಕ್ಸ್, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್​ಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲು ಕ್ರಮ. ಹೀಗೆ ಹಲವರು ಘೋಷಣೆಗಳನ್ನು ಸಿದ್ದರಾಮಯ್ಯ ಬಜೆಟ್ ನಲ್ಲಿ ಮಾಡಿದ್ದಾರೆ.

Category
ಕರಾವಳಿ ತರಂಗಿಣಿ