image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮುಂಬೈ ಇಂಡಿಯನ್ಸ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 12 ರನ್​ಗಳಿಂದ ರೋಚಕ ಗೆಲುವು

ಮುಂಬೈ ಇಂಡಿಯನ್ಸ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 12 ರನ್​ಗಳಿಂದ ರೋಚಕ ಗೆಲುವು

ಮುಂಬೈ : ಐಪಿಎಲ್​ನ 20ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ದ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 12 ರನ್‌ಗಳಿಂದ ಮಣಿಸಿದೆ.

ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ್ದ ಬೃಹತ್ ಗುರಿಯೊಂದಿಗೆ ಮೈದಾನಕ್ಕಿಳಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿತ್ತು. ಕೇವಲ 1.3 ಓವರ್​ಗಳಲ್ಲೆ 21 ರನ್​ ಬಾರಿಸಿತು. ರೋಹಿತ್ ಶರ್ಮಾ 9 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 17 ರನ್​ ಬಾರಿಸಿದ್ದರು. ಆದರೆ ಯಶ್​ ದಯಾಲ್ ​ಎಸೆತದಲ್ಲಿ ಪೆವಿಲಿಯ್​ ಸೇರಿದರು.

ನಂತರ ವಿಲ್ ಜಾಕ್ಸ್ (22) ಮತ್ತು ಸೂರ್ಯಕುಮಾರ್ ಯಾದವ್ (28) ರನ್ ಗಳಿಸಲು ಕಷ್ಟಪಟ್ಟರು. ಇದರಿಂದಾಗಿ ಮುಂಬೈ ರನ್​ ವೇಗಕ್ಕೆ ಬ್ರೇಕ್​ ಬಿದಿತ್ತು. ಈ ಇಬ್ಬರ ನಿರ್ಗಮನದ ಬಳಿಕ ಅಬ್ಬರಿಸಿದ ತಿಲಕ್ ವರ್ಮಾ (56) ಮತ್ತು ಹಾರ್ದಿಕ್ ಪಾಂಡ್ಯ (42) ಪಂದ್ಯಕ್ಕೆ ತಿರುವು ನೀಡಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ಪಂದ್ಯ ಕೊನೆಯ ಓವರ್‌ ವರೆಗೆ ಸಾಗಿತು.

ಕೊನೆಯ ಎರಡು ಓವರ್‌ಗಳಲ್ಲಿ 28 ರನ್‌ಗಳು ಬೇಕಾಗಿದ್ದಾಗ, ಹ್ಯಾಜಲ್‌ವುಡ್ ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡಿದರು. ಆದರೆ ಅಂತಿಮ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಅದ್ಭುತ ಬೌಲಿಂಗ್​ ಮಾಡಿ ಕೇವಲ ಆರು ರನ್ ನೀಡಿ 3 ವಿಕೆಟ್ ಪಡೆದರು. ಇದರೊಂದಿಗೆ ಆರ್‌ಸಿಬಿ ಐಪಿಎಲ್​ನಲ್ಲಿ ತನ್ನ ಮೂರನೇ ಗೆಲುವನ್ನು ದಾಖಲಿಸಿತು.

ಇದಕ್ಕೂ ಮನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್​ಸಿಬಿ ವಿರಾಟ್ ಕೊಹ್ಲಿ (67), ನಾಯಕ ರಜತ್ ಪಾಟಿದಾರ್ (64) ಅರ್ಧಶತಕ ಮತ್ತು ಜಿತೇಶ್ ಶರ್ಮಾ (40) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 221 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ಪರ ಟ್ರೆಂಟ್ ಬೌಲ್ಟ್ 2, ಹಾರ್ದಿಕ್ ಪಾಂಡ್ಯ 2 ವಿಕೆಟ್​​ ಮತ್ತು ವಿಘ್ನೇಶ್ ಪುತೂರ್ ಒಂದು ವಿಕೆಟ್ ಪಡೆದರು.

ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ತಂಡ 10 ವರ್ಷದ ಬಳಿಕ ಮುಂಬೈ ತಂಡವನ್ನು ಮಣಿಸಿ ಗೆಲುವು ಸಾಧಿಸಿತು. ಈ ಹಿಂದೆ 2015ರಲ್ಲಿ ಕೊನೆಯ ಬಾರಿಗೆ ಈ ಮೈದಾನದಲ್ಲಿ ಗೆಲುವು ಸಾಧಿಸಿತ್ತು.

Category
ಕರಾವಳಿ ತರಂಗಿಣಿ