image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಜೆಪಿ ಶಾಸಕ `ಮುನಿರತ್ನ ಮೇಲೆ ಮೊಟ್ಟೆ ಎಸೆತ :ಹಲ್ಲೆಗೆ ಯತ್ನದ ಆರೋಪ.!

ಬಿಜೆಪಿ ಶಾಸಕ `ಮುನಿರತ್ನ ಮೇಲೆ ಮೊಟ್ಟೆ ಎಸೆತ :ಹಲ್ಲೆಗೆ ಯತ್ನದ ಆರೋಪ.!

 

ಬೆಂಗಳೂರು :  ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ  ಆ‌ರ್. ಆ‌ರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ ನಂತರ  ಹಲ್ಲೆಗೂ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ.

ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ  ಬಿಜೆಪಿ ಶಾಸಕ ಮುನಿರತ್ನ ರಾಜ್ ಕುಮಾರ್ ಸಮಾಧಿ ಬಳಿ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ

Category
ಕರಾವಳಿ ತರಂಗಿಣಿ