image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದ್ವಿಚಕ್ರಗಳ ಮದ್ಯೆ ಅಪಘಾತ: ಒಂದು ಸ್ಕೂಟರ್ ನಲ್ಲಿ ಗೋಮಾಂಸ ಸಾಗಾಟ ಪತ್ತೆ

ದ್ವಿಚಕ್ರಗಳ ಮದ್ಯೆ ಅಪಘಾತ: ಒಂದು ಸ್ಕೂಟರ್ ನಲ್ಲಿ ಗೋಮಾಂಸ ಸಾಗಾಟ ಪತ್ತೆ

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ  ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ.  ಡಿ. 24ರ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Category
ಕರಾವಳಿ ತರಂಗಿಣಿ