ಉಳ್ಳಾಲ: ಲಾರಿ-ಬೈಕ್ ಅಪಘಾತದಲ್ಲಿ ಮೆಡಿಕಲ್ ಮಾಲೀಕ ದಾರುಣವಾಗಿ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಲ್ಲಪದವು ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ ಹಾಜಿರಾ ಮೆಡಿಕಲ್ ಮಾಲೀಕ ಅನ್ಸಾಫ್ (25) ಮೃತಪಟ್ಟವರು. ಇಂದು ಮಧ್ಯಾಹ್ನ ದೇರಳಕಟ್ಟೆ ಕಡೆಯಿಂದ ತಿಲ್ಲಪದವು ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ತಿಲ್ಲಪದವಿನ ಡಿವೈಡರ್ ಸಮೀಪ ಲಾರಿಯೊಂದು ಹಠಾತ್ತನೆ ತಿರುಗಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ಅನ್ಸಾಫ್ ಮೃತಪಟ್ಟಿದ್ದಾರೆ.
ಕೆಲ ವರ್ಷಗಳ ಹಿಂದಷ್ಟೇ ಕಲಿಕೆ ಮುಗಿಸಿ ಅನ್ಸಾಫ್ ದೇರಳಕಟ್ಟೆ ಜಂಕ್ಷನ್ನಲ್ಲಿ ಮೆಡಿಕಲ್ ಅಂಗಡಿಯ ನಡೆಸುತ್ತಾ ಬಂದಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.