image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ರಕ್ಷಣೆ

ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ರಕ್ಷಣೆ

ಬಂಟ್ವಾಳ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಇಂದು ನಡೆದಿದೆ.

ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಶಂಕರಯ್ಯ ಆತ್ಮಹತ್ಯೆ ಉದ್ದೇಶಕ್ಕಾಗಿಯೇ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ ಅವರನ್ನು ಸುರಕ್ಷತವಾಗಿ ದಡಕ್ಕೆ ಕರೆತಂದಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದ್ದು, ನಂತರ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Category
ಕರಾವಳಿ ತರಂಗಿಣಿ