ಚಿಕ್ಕಮಗಳೂರು: ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ತ್ರಿಬಲ್ ಮರ್ಡರ್ ನಡೆದಿದ್ದು, ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು ಕೊಲೆಯಾದ ದುರ್ದೈವಿಗಳು. ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ಬಿದ್ದಿದೆ. ಆರೋಪಿಯನ್ನು ಶಾಲೆಯ ವಾಹನ ಚಾಲಕ ರತ್ನಾಕರ್ ಎಂದು ಗುರುತಿಸಲಾಗಿದ್ದು, ನಾಡ ಬಂದೂಕಿನಿಂದ ಮೂವರನ್ನ ಹತ್ಯೆಗೈದ ರತ್ನಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕೊಲೆ ಮಾಡಿರುವ ರತ್ನಾಕರ್ ಸೆಲ್ಪಿ ವಿಡಿಯೋ ಮೂಲಕ ಸಂಸಾರದ ನೋವು ತೋಡಿಕೊಂಡಿದ್ದು, ರತ್ನಾಕರ್ ಪತ್ನಿ ಎರಡು ವರ್ಷದ ಹಿಂದೆ ದೂರವಾಗಿದ್ದರು. ಮಗಳು ರತ್ನಾಕರ್ ಬಳಿ ಇದ್ದು, ಮಗಳಿಗೆ ಶಾಲೆಯಲ್ಲಿ ಮಕ್ಕಳು ನಿಮ್ಮ ಅಮ್ಮ ಎಲ್ಲಿ ಕೇಳ್ತಾರೆ, ಮಗಳು ನನಗೆ ಕೇಳುತ್ತಾಳೆ. ನನಗೆ ಗೊತ್ತಿಲ್ಲದಂತೆ ಮಗಳು ಆಲ್ಬಂನಿಂದ ಫೋಟೋ ತೆಗೆದುಕೊಂಡು ಹೋಗಿ ಶಾಲೆಯಲ್ಲಿ ತೋರಿಸಿದ್ದಾಳೆ. ಮಗಳು ತುಂಬಾ ಬೇಜಾರಾಗಿದ್ದು, "ಪಪ್ಪಾ... ಎಲ್ಲಾ ನಿಮ್ಮ ಅಮ್ಮ ಎಲ್ಲಿ ಎನ್ನುತ್ತಾರೆ" ಎಂದು ಕೇಳುತ್ತಾಳೆ. ನನ್ನ ನಿಮ್ಮ ಅಮ್ಮ ಎಲ್ಲಿ ಎನ್ನುತ್ತಾರೆ" ಎಂದು ಕೇಳುತ್ತಾಳೆ. ನನ್ನ ನಿರ್ಧಾರವನ್ನ ನನ್ನ ಕುಟುಂಬದವರಿಗೆ ಹೇಳಿದ್ದೇನೆ. ನನ್ನ ಮನೆಯವಳು ನನಗೆ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಪಾಪುನೂ ಬೇಡ ಅಂತ ಬಿಟ್ಟಳು, ಪಾಪುನೂ ನಾನೇ ನೋಡಿಕೊಳ್ಳುತ್ತಿದ್ದೇನೆ' ಎಂದು ಕೊಲೆ ಬಳಿಕ ಸೆಲ್ಸಿ ವಿಡಿಯೋ ಮಾಡಿ ಹೇಳಿಕೊಂಡಿದ್ದಾನೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.