image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಪರಿಚಿತ ವ್ಯಕ್ತಿಯ ಕೊಲೆ: ಪ್ರಕರಣ ದಾಖಲು

ಅಪರಿಚಿತ ವ್ಯಕ್ತಿಯ ಕೊಲೆ: ಪ್ರಕರಣ ದಾಖಲು

ಮಂಗಳೂರು: ನಗರ ಹೊರವಲಯದ ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕೊಲೆ (murder)ಯಾಗಿರುವ ಘಟನೆ ರವಿವಾರ ಸಂಜೆ ವರದಿಯಾಗಿದೆ.

ಮೃತನಾಗಿರುವ ವ್ಯಕ್ತಿ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಮಾಹಿತಿಯಿಂದ ತಿಳಿದಿದೆ.

Category
ಕರಾವಳಿ ತರಂಗಿಣಿ