image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೀನು ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನ- ಹಿಂದೂ ಮಹಿಳೆಯ ಸಮಯ ಪ್ರಜ್ಞೆಯಿಂದ ಯುವಕ ಬಚಾವ್

ಮೀನು ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನ- ಹಿಂದೂ ಮಹಿಳೆಯ ಸಮಯ ಪ್ರಜ್ಞೆಯಿಂದ ಯುವಕ ಬಚಾವ್

ಮಂಗಳೂರು: ನಗರದ ಕುಂಟಿಕಾನ ಬಳಿ ಮೀನು ವ್ಯಾಪಾರಿ ಯುವಕನನ್ನು ಅಟ್ಟಾಡಿಸಿ ಕಲ್ಲು ಹೊತ್ತು ಹಾಕಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ವರದಿಯಾಗಿದೆ. ಉಳ್ಳಾಲ ನಿವಾಸಿ ಲುಕ್ಕಾನ್ ಹಲ್ಲೆಗೊಳಗಾದ ಮೀನು ವ್ಯಾಪಾರಿ ಎನ್ನಲಾಗಿದೆ.

ಲುಕ್ಮಾನ್ ಕುಂಟಿಕಾನದಲ್ಲಿ ಮೀನು ಕೊಡಲೆಂದು ಗ್ರಾಹಕರೋರ್ವರನ್ನು ಕಾಯುತ್ತಿದ್ದರು. ಈ ವೇಳೆ ಕಪ್ಪು ಬಣ್ಣದ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಲುಕ್ಮಾನ್ ಅವರ ಮೇಲೆ ಏಕಾಏಕಿ ಹಲ್ಲೆ ಮಾಡಿದೆ. ಈ ವೇಳೆ ಅವರನ್ನು ಕೆಳಗೆ ಬೀಳಿಸಿದ ತಂಡವು ಕಲ್ಲು ಹೊತ್ತು ಹಾಕಿ ಕೊಲೆಗೆತ್ನಿಸಿದೆ. ಈ ದೃಶ್ಯವನ್ನು ನೋಡಿದ ಹಿಂದೂ ಮಹಿಳೆಯೊಬ್ಬರು ಬೊಬ್ಬೆ ಹಾಕಿ ಲುಕ್ಮಾನ್ ರಕ್ಷಣೆಗೆ ಧಾವಿಸಿದ್ದಾರೆ. ಆಗ ದುಷ್ಕರ್ಮಿಗಳು‌ ಅಲ್ಲಿಂದ ಕಾಲ್ಕಿತ್ತಿದ್ದು, ಲುಕ್ಮಾನ್ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. 

ಗಾಯಾಳು ಲುಕ್ಮಾನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Category
ಕರಾವಳಿ ತರಂಗಿಣಿ