ಮಂಗಳೂರು: ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ವಾಮಂಜೂರು ನಿವಾಸಿ ಸುಲೆಮಾನ್(50) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಚಾಕುವಿನಿಂದ ಇರಿದು ಸಂಬಂಧಿ ಮುಸ್ತಾಫ ಕೊಲೆ ಮಾಡಿದ್ದಾನೆ. ಸುಲೆಮಾನ್ ಅವರ ಇಬ್ಬರು ಪುತ್ರರ ಮೇಲೆ ಹಲ್ಲೆ ನಡೆಸಿ ಮುಸ್ತಾಫ ಪರಾರಿಯಾಗಿದ್ದಾನೆ.
ಸುಲೆಮಾನ್ ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಅವರು ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಮದುವೆ ದಲ್ಲಾಳಿಯಾಗಿದ್ದ ಸುಲೆಮಾನ್ ತನ್ನ ಸಂಬಂಧಿಯಾಗಿದ್ದ ಮುಸ್ತಾಫನಿಗೆ ಮದುವೆ ಮಾಡಿಸಿದ್ದ. ಮದುವೆಯ ವೇಳೆ ಮುಸ್ತಾಫ. ಮದುವೆಯ ನಂತರ ಪತಿ ಪತ್ನಿ ನಡುವೆ ವೈಮಸ್ಸು ಉಂಟಾಗಿತ್ತು. ಈ ವಿಚಾರವಾಗಿ ಮಾತನಾಡಬೇಕೆಂದು ಮುಸ್ತಾಫ ಸುಲೆಮಾನ್ ಅವರನ್ನು ಕರೆಸಿದ್ದ. ತನ್ನ ಇಬ್ಬರು ಪುತ್ರರೊಂದಿಗೆ ಮುಸ್ತಾಫ ಮನೆ ಬಳಿ ಸುಲೆಮಾನ್ ಬಂದಿದ್ದರು. ಈ ವೇಳೆ ವಾಗ್ವಾದ ನಡೆದು ಸುಲೆಮಾನ್ ಗೆ ಮುಸ್ತಾಫ ಚಾಕುವಿನಿಂದ ಇರಿದಿದ್ದಾನೆ. ತಂದೆಯ ರಕ್ಷಣೆಗೆ ಬಂದ ಇಬ್ಬರು ಪುತ್ರರ ಮೇಲೆಯೂ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಆರೋಪಿ ಮುಸ್ತಾಫನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.