image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ಅಪರಾದ ಕೃತ್ಯದ ಮೃತದೇಹಗಳನ್ನು ತಾನೇ ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯಿಂದ ಠಾಣೆಗೆ ದೂರು

ಧರ್ಮಸ್ಥಳದಲ್ಲಿ ಅಪರಾದ ಕೃತ್ಯದ ಮೃತದೇಹಗಳನ್ನು ತಾನೇ ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯಿಂದ ಠಾಣೆಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ತನಗೆ ಜೀವ ಬೆದರಿಕೆ ಒಡ್ಡಿ,  ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ತನಗೆ  ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ  ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ದವಿರುವುದಾಗಿ, ದಿನಾಂಕ 03.07.2026 ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದೆ. ಈ ದೂರಿನ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು, ಈ ದಿನ ದಿನಾಂಕ 04.07.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್‌ ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು ಎಂದು ಪೋಲಿಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ