ಮಂಗಳೂರು: ಪುತ್ತೂರು ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ. ರಾವ್ ಎಂಬಾತನಿಂದ ಅತ್ಯಾಚಾರ-ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗೆ ಬೆದರಿಕೆಯಿದ್ದು, ಪೊಲೀಸ್ ರಕ್ಷಣೆ ನೀಡಿ ಎಂದು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾಳೆ.
ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಬಂದ ಸಂತ್ರಸ್ತೆ ಈ ಬಗ್ಗೆ ಮನವಿ ಸಲ್ಲಿಸಿದ್ದು, "ಇತ್ತೀಚೆಗೆ ನನ್ನ ಮನೆಯ ಸುತ್ತಮುತ್ತ ಕೆಲವು ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿದ್ದಾರೆ. ಅದರಲ್ಲೂ ರಾತ್ರಿಯ ವೇಳೆ ಅಪರಿಚಿತರು ಸಂಚರಿಸುತ್ತಿರುವುದು ನಾನು ಮತ್ತು ನನ್ನ ತಾಯಿ ಗಮನಿಸಿದ್ದೇವೆ. ನನಗೆ ಆಗಿರುವ ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಗುವುದು ನನ್ನ ಮಗುವಿನಿಂದ ಮಾತ್ರ. ಆದ್ದರಿಂದ ನನ್ನ ಜೀವಕ್ಕೆ ಅಪಾಯವಾಗುವ ಬಗ್ಗೆ ಭಯವಿದೆ. ಆದ್ದರಿಂದ ನನಗೆ ಮತ್ತು ನನ್ನ ಮಗುವಿಗೆ ಪೊಲೀಸ್ ರಕ್ಷಣೆ ನೀಡಬೇಕು" ಎಂದು ಒತ್ತಾಯಿಸಿದ್ದಾಳೆ
ಈ ಸಂದರ್ಭ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಡಿ ಮತ್ತಿತರರು ಉಪಸ್ಥಿತರಿದ್ದರು.