image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ಹಾಗೂ ಸಿಬ್ಬಂದಿ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ಹಾಗೂ ಸಿಬ್ಬಂದಿ

ವಿಟ್ಲ : ಲಂಚ ಪ್ರಕರಣದಲ್ಲಿ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟ‌ರ್ ವಿಲಿಯಂನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನನ್ನ ಮಾವನಿಗೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ ವಯಸ್ಸಾಗಿದ್ದರಿಂದ ನಾನು ಗ್ರಾಮ ಪಂಚಾಯಿತಿ ಕಚೇರಿಗೆ ಹೋಗಿ ವಿಚಾರಿಸಿದಾಗ ನಿಮಗೆ ಕೊಳವೆಬಾವಿ ಉಚಿತವಾಗಿ ಸಿಗುತ್ತದೆ. ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡಲಿಕ್ಕೆ ಇದೆ. ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ, ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತನ್ನಿ ಎಂದು ಅಧ್ಯಕ್ಷೆ ಹೇಳಿದ್ದರು ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ ಬಿಲ್‌ ಕಲೆಕ್ಟ‌ರ್ ವಿಲಿಯಂ ಗೆ ₹10 ಸಾವಿರ ಲಂಚದ ಹಣ ಪಡೆಯಲು ಸೂಚಿಸಿದ್ದರು. ₹10 ಸಾವಿರ ಲಂಚದ ಹಣ ಪಡೆಯುವಾಗ ನಾವು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಪ್ರಭಾರ ಎಸ್‌ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯ ಡಿವೈಎಸ್‌ಪಿಗಳಾದ ಗಾನ ಪಿ ಕುಮಾರ್, ಸುರೇಶ್ ಕುಮಾ‌ರ್ ಪಿ., ಇನ್‌ಸ್ಪೆಕ್ಟರ್‌ಗಳಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್., ರವಿ ಪವಾ‌ರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Category
ಕರಾವಳಿ ತರಂಗಿಣಿ