image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂಚಾರ ನಿಯಮ ಮೀರಿದ ಸುಳ್ಯದ ಯುವಕನಿಗೆ ಬಿಸಿ ಮುಟ್ಟಿಸಿದ ನ್ಯಾಯಾಲಯ: ದಂಡದ ಜೊತೆಗೆ ಜಂಕ್ಷನ್‌ನಲ್ಲಿ ನಿಂತು ಜಾಗೃತಿ ಮೂಡಿಸಲು ಸೂಚನೆ

ಸಂಚಾರ ನಿಯಮ ಮೀರಿದ ಸುಳ್ಯದ ಯುವಕನಿಗೆ ಬಿಸಿ ಮುಟ್ಟಿಸಿದ ನ್ಯಾಯಾಲಯ: ದಂಡದ ಜೊತೆಗೆ ಜಂಕ್ಷನ್‌ನಲ್ಲಿ ನಿಂತು ಜಾಗೃತಿ ಮೂಡಿಸಲು ಸೂಚನೆ

ಸುಳ್ಯ: ಪದೇ ಪದೇ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ಇಲ್ಲಿನ ನ್ಯಾಯಾಲಯವು ವಿಶಿಷ್ಟವಾದ ಶಿಕ್ಷೆಯನ್ನು ವಿಧಿಸಿದೆ. ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ. ರವರು ಐ ಎಂ ವಿ ಆಕ್ಟ್ (IMV Act) ಅಡಿಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಸುಳ್ಯದ ಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

​ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು, ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂಪಾಯಿ ದಂಡ ವಿಧಿಸಿದೆ. ಇದರೊಂದಿಗೆ, ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ತಲಾ 5 ದಿನಗಳಂತೆ ಒಟ್ಟು 15 ದಿನಗಳ ಕಾಲ (ದಿನಾಂಕ: 15/03/2026 ರಿಂದ 29/03/2026 ರವರೆಗೆ) ಸುಳ್ಯ ಪೇಟೆಯ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಅರಿವು ಮೂಡಿಸುವ ಫಲಕಗಳನ್ನು ಹಿಡಿದು ನಿಲ್ಲುವ ಮೂಲಕ 'ಸಮುದಾಯ ಸೇವೆ' ನಿರ್ವಹಿಸುವಂತೆ ಆದೇಶಿಸಿದೆ. ಅಲ್ಲದೆ, ಆರೋಪಿತನ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯವು ಸೂಚಿಸಿದೆ.

Category
ಕರಾವಳಿ ತರಂಗಿಣಿ