image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ : ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ

ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ : ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ

ನವದೆಹಲಿ: 'ಭೌಗೋಳಿಕವಾಗಿ ಪಾಕಿಸ್ತಾನ ತನ್ನ ಸ್ಥಾನ ಮತ್ತು ಅಸ್ಥಿತ್ವವನ್ನು ಉಳಿಸಿಕೊಳ್ಳಲು ಬಯಸಿದರೆ ಅದು ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದ ಅನುಪ್‌ಗಢದಲ್ಲಿರುವ ಸೇನಾ ಪೋಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, 'ಭಯೋತ್ಪಾದನೆ ಬೆಂಬಲಿಸುವುದನ್ನು ನಿಲ್ಲಿಸಿ.. ಇಲ್ಲವಾದಲ್ಲಿ ನಿಮ್ಮ ಭೌಗೋಳಿಕ ಉಪಸ್ಥಿತಿಯನ್ನು ಕಳೆದುಕೊಳ್ಳುತ್ತೀರಿ. ಪಾಕಿಸ್ತಾನವು ನಕ್ಷೆಯಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ, ಅದು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಪಾಕಿಸ್ತಾನವನ್ನು ಭೂಪಟದಿಂದಲೇ ಅಳಿಸಿಹಾಕಿ ಬಿಡುತ್ತೇವೆ ಎಂದು ಹೇಳಿದರು.

ಭಯೋತ್ಪಾದಕ ನಾಯಕರ ಬೆಂಬಲಕ್ಕೆ ಹೆಸರುವಾಸಿಯಾದ ಪಶ್ಚಿಮ ನೆರೆಯ ರಾಷ್ಟ್ರ ಪಾಕಿಸ್ತಾನ ತನ್ನ ನಿಲುವನ್ನು ಬದಲಿಸಿಕೊಳ್ಳಬೇಕು. ಈ ಬಾರಿ ಭಾರತೀಯ ಪಡೆಗಳು ಯಾವುದೇ ಸಂಯಮವನ್ನು ತೋರಿಸುವುದಿಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ರಫ್ತು ಮಾಡುವುದನ್ನು ನಿಲ್ಲಿಸಲು ನಿರಾಕರಿಸಿದರೆ 'ಆಪರೇಷನ್ ಸಿಂಧೂರ್' ನ ಎರಡನೇ ಆವೃತ್ತಿಯು ದೂರವಿಲ್ಲ ಎಂದು ದ್ವಿವೇದಿ ಎಚ್ಚರಿಸಿದರು. "ಈ ಬಾರಿ ನಾವು ಆಪರೇಷನ್ ಸಿಂಧೂರ್ 1.0 ರಲ್ಲಿ ಹೊಂದಿದ್ದ ಸಂಯಮವನ್ನು ಕಾಯ್ದುಕೊಳ್ಳುವುದಿಲ್ಲ. ಈ ಬಾರಿ ಪಾಕಿಸ್ತಾನ ಭೌಗೋಳಿಕವಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ ಎಂದು ಯೋಚಿಸುವಂತೆ ಮಾಡುವಂತಹದ್ದನ್ನು ನಾವು ಮಾಡುತ್ತೇವೆ. ಪಾಕಿಸ್ತಾನ ಭೌಗೋಳಿಕವಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ, ಅದು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ದೇವರು ಬಯಸಿದರೆ, ನಿಮಗೆ ಶೀಘ್ರದಲ್ಲೇ ಅವಕಾಶ ಸಿಗುತ್ತದೆ. ಶುಭವಾಗಲಿ. ಎಂದು ಹೇಳುವ ಮೂಲಕ ದ್ವಿವೇದಿ ಸೈನಿಕರಿಗೆ ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿರುವಂತೆ ಸೇನಾ ಮುಖ್ಯಸ್ಥರು ತಿಳಿಸಿದರು.

Category
ಕರಾವಳಿ ತರಂಗಿಣಿ