image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಒಡಿಶಾದ ನುವಾಪಾದ ಜಿಲ್ಲೆ ಗಡಿಪ್ರದೇಶಗಳಲ್ಲಿ ಮತ್ತು ಗರಿಯಾಬಂಧ್​ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರು ಸಾವು

ಒಡಿಶಾದ ನುವಾಪಾದ ಜಿಲ್ಲೆ ಗಡಿಪ್ರದೇಶಗಳಲ್ಲಿ ಮತ್ತು ಗರಿಯಾಬಂಧ್​ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರು ಸಾವು

ಒಡಿಶಾ : ನುವಾಪಾದ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮತ್ತು ಗರಿಯಾಬಂಧ್‌ನಲ್ಲಿ ತಡರಾತ್ರಿ ಹಾಗೂ ಮುಂಜಾನೆ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 10 ನಕ್ಸಲರು ಹತರಾಗಿದ್ದಾರೆ.

ಕಾರ್ಯಾಚರಣೆಯ ವೇಳೆ ಅಪಾರ ಪ್ರಮಾಣದ ಬಂದೂಕುಗಳು, 1 ಎಸ್‌ಎಲ್‌ಆರ್ ಸೇರಿದಂತೆ ಮದ್ದುಗುಂಡುಗಳು ಮತ್ತು ಐಇಡಿಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

ಈ ಪ್ರದೇಶದಲ್ಲಿ ಪೊಲೀಸರಿಂದ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಒಡಿಶಾದ ನುವಾಪಾದ ಜಿಲ್ಲೆಯ ಗಡಿಯಿಂದ ಕೇವಲ 5 ಕಿಲೋ ಮೀಟರ್​ ದೂರದಲ್ಲಿರುವ ಛತ್ತೀಸ್‌ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲರು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.

ಖಚಿತ ಮಾಹಿತಿಯ ಮೇರೆಗೆ ಛತ್ತೀಸ್‌ಗಢ ಪೊಲೀಸ್ ಮತ್ತು ಸಿಆರ್‌ಪಿಎಫ್‌ನ ಇ-30 ಪಡೆಗಳೊಂದಿಗೆ ಎಸ್‌ಒಜಿ (ಒಡಿಶಾ ಪೊಲೀಸ್) ಸಿಬ್ಬಂದಿ ಜಂಟಿ ಅಂತಾರಾಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

Category
ಕರಾವಳಿ ತರಂಗಿಣಿ