ಮುಂಬೈ : ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ದುರಂತದ ಬಗ್ಗೆ ಶೂನ್ಯ ಎಫ್ಐಆರ್ ದಾಖಲಿಸಿಕೊಳ್ಳುವ ಅಧಿಕಾರ ನೆರೆಯ ರಾಜ್ಯ ಕರ್ನಾಟಕಕ್ಕೆ ಇಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ. 'ಮಹಾರಾಷ್ಟ್ರದ ಹೆಸರು ಕೆಡಿಸಲು ಕರ್ನಾಟಕದಲ್ಲಿ ಜೀರೊ ಎಫ್ಐಆರ್ ದಾಖಲಿಸಲಾಗಿದೆ' ಎಂದು ಅವರು ದೂರಿದ್ದಾರೆ. 'ಅಜಿತ್ ಪವಾರ್ ಅವರ ಸಾವು ಕೇವಲ ಅಪಘಾತವಲ್ಲ, ಅದೊಂದು ವ್ಯವಸ್ಥಿತ ಕೊಲೆ' ಎಂದು ಆರೋಪಿಸಿ ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೋಮವಾರ ಎಫ್ಐಆರ್ ದಾಖಲಾಗಿತ್ತು.