image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿಗರ ಬಸ್‌: ಹಲವರ ಸ್ಥಿತಿ ಗಂಭೀರ

ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿಗರ ಬಸ್‌: ಹಲವರ ಸ್ಥಿತಿ ಗಂಭೀರ

ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್‌ ಪ್ರಪಾತಕ್ಕೆ ಉರುಳಿ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ವರದಿಯಾಗಿದೆ.

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಭಿಮತಾಲ್ ನಲ್ಲಿ ಈ ದುರಂತ ಸಂಭವಿಸಿದ್ದು,  ಬಸ್ ಭಿಮತಾಲ್ ನಿಂದ ಹಲಾನಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ