image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ

ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ

ಚೆನ್ನೈ: ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರಸಿದ್ಧ ಕುಟ್ರಾಲಂ ಜಲಪಾತ ಪ್ರದೇಶದಲ್ಲಿ ಜಿಲ್ಲಾಡಳಿತವು ಹಲವಾರು ನಿರ್ಬಂಧಗಳನ್ನು ವಿಧಿಸಿದೆ. ಕುಟ್ರಾಲಂನ ಐದು ಜಲಪಾತಗಳು ಎಂದೂ ಕರೆಯಲ್ಪಡುವ ಮುಖ್ಯ ಜಲಪಾತ ಮತ್ತು ಐಂತರುವಿಯಲ್ಲಿ ಪ್ರವಾಸಿಗರು ಸ್ನಾನ ಮಾಡುವುದನ್ನು ನಿಷೇಧಿಸಲಾಗಿದೆ. ಕುಟ್ಟಲಂ ಜಲಪಾತ ಎಂದೂ ಕರೆಯಲ್ಪಡುವ ಈ ಜಲಪಾತವು ಕೇರಳದ ಕೊಲ್ಲಂ ಜಿಲ್ಲೆಯ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ಸನಿಹದಲ್ಲಿದೆ.

ಈ ಪ್ರದೇಶದಲ್ಲಿ ಒಟ್ಟು ಒಂಬತ್ತು ಜಲಪಾತಗಳಿದ್ದು ಇವುಗಳಲ್ಲಿ ಪೆರರುವಿ, ಐಂತರುವಿ ಮತ್ತು ಪುಲಿ ಅರುವಿ ಪ್ರಮುಖವಾಗಿವೆ. ಈ ಗಮ್ಯಸ್ಥಾನವು ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿಗೆ ಅತ್ಯಧಿಕ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ತಮಿಳುನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಟಿಟಿಡಿಸಿ) ಪ್ರವಾಸಿ ಋತುವಿನಲ್ಲಿ ಇಲ್ಲಿಗೆ ಹತ್ತಿರದ ದೋಣಿಮನೆಯಲ್ಲಿ ಬೋಟಿಂಗ್ ಸೌಲಭ್ಯವನ್ನು ಸಹ ನಿರ್ವಹಿಸುತ್ತದೆ.

ಆದರೆ, ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮತ್ತು ಭಾರಿ ಮಳೆಯಿಂದಾಗಿ, ಕುಟ್ರಾಲಂ ಜಲಪಾತದಲ್ಲಿ ನೀರಿನ ಹರಿವು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆ ಸುರಿಯುತ್ತಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ (ಆರ್ ಎಂಸಿ) ತಿಳಿಸಿದೆ. ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ ಮತ್ತು ತೆಂಕಾಸಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾನುವಾರ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Category
ಕರಾವಳಿ ತರಂಗಿಣಿ