image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಲ್ತುಳಿತದ ನಂತರ ಮಹಾಕುಂಭದಲ್ಲಿ ಜನದಟ್ಟಣೆ ನಿರ್ವಹಣೆಗೆ ಹಲವು ಬದಲಾವಣೆ

ಕಾಲ್ತುಳಿತದ ನಂತರ ಮಹಾಕುಂಭದಲ್ಲಿ ಜನದಟ್ಟಣೆ ನಿರ್ವಹಣೆಗೆ ಹಲವು ಬದಲಾವಣೆ

ಉತ್ತರ ಪ್ರದೇಶ : ಮಹಾಕುಂಭ ಮೇಳದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಪ್ರಮುಖವಾಗಿ ಐದು ಬದಲಾವಣೆಗೆ ಮುಂದಾಗಿದೆ. ಈ ಬದಲಾವಣೆಗಳನ್ನು ತಕ್ಷಣ ಜಾರಿ ಮಾಡಿ, ಕುಂಭ ಮೇಳವನ್ನು ಸುರಕ್ಷಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಮಹಾ ಕುಂಭ ಮೇಳದ ಪ್ರದೇಶಕ್ಕೆ ಎಲ್ಲಾ ರೀತಿಯ ವಾಹನಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ಯಾವುದೇ ವಿನಾಯಿತಿ ಇಲ್ಲದೇ ವಿಶೇಷ ಪಾಸ್​ಗಳ ಪ್ರವೇಶಕ್ಕೆ ಅನುಮತಿ ಇಲ್ಲ. ಭಕ್ತರಿಗೆ ಅನುಕೂಲವಾಗುವಂತೆ ಏಕ ಮುಖ ಮಾರ್ಗದಲ್ಲಿ ಟ್ರಾಫಿಕ್​ ವ್ಯವಸ್ಥೆ ಜಾರಿಗೆ ನಿರ್ಧಾರ.

ಪ್ರಯಾಗ್​ರಾಜ್​ ನೆರೆಹೊರೆ ಜಿಲ್ಲೆಯಿಂದ ಹೊರಬರುವ ವಾಹನಗಳ ಆಗಮನವನ್ನು ನಿರ್ಬಂಧಿಸುವ ಮೂಲಕ ದಟ್ಟಣೆ ಕಡಿಮೆ ಮಾಡಲಾಗಿದೆ. ನಗರದಲ್ಲಿ ಫೆ. 4ರವರೆಗೆ ನಾಲ್ಕು ಚಕ್ರದ ವಾಹನಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

Category
ಕರಾವಳಿ ತರಂಗಿಣಿ