ನವದೆಹಲಿ: ವೆಸ್ಟ್ಬ್ಯಾಂಕ್ನಲ್ಲಿ ಕಾಣೆಯಾಗಿದ್ದ 10 ಮಂದಿ ಭಾರತೀಯರನ್ನು ಇಸ್ರೇಲ್ಗೆ ಸುರಕ್ಷಿತವಾಗಿ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವಾಲಯ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತೀಯರನ್ನು ಪತ್ತೆ ಹಚ್ಚಲು ಇಸ್ರೇಲ್ ಅಧಿಕಾರಿಗಳು ಪ್ರಯತ್ನಿಸಿದರು ಎಂದು ತಿಳಿಸಿದ್ದಾರೆ.
ಇವರೆಲ್ಲಾ ವೆಸ್ಟ್ ಬ್ಯಾಂಕ್ನಲ್ಲಿ ಇದ್ದರು. ಅವರನ್ನು ಇಸ್ರೇಲ್ಗೆ ಕರೆತರಲಾಗಿದೆ. ಅವರು ವೆಸ್ಟ್ಬ್ಯಾಂಕ್ಗೆ ಹೇಗೆ ಹೋದರು ಎಂಬ ಕುರಿತು ತನಿಖೆ ನಡೆಸಲಾಗುವುದು. ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇಸ್ರೇಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಮ್ಮ ರಾಯಭಾರ ಕಚೇರಿ ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ವೆಸ್ಟ್ ಬ್ಯಾಂಕ್ಗೆ ಹೋಗಿದ್ದ ಎಲ್ಲಾ 10 ಭಾರತೀಯರನ್ನು ಇಸ್ರೇಲ್ಗೆ ಕರೆತರಲಾಗಿದ್ದು, ನೋಡಿಕೊಳ್ಳಲಾಗುತ್ತಿದೆ ಎಂದರು.