image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಚುನಾವಣಾ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಅತಿಶಿಗೆ ನೋಟಿಸ್​ ಜಾರಿ ಮಾಡಿದ ದೆಹಲಿ ಹೈ ಕೋರ್ಟ್

ಚುನಾವಣಾ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಅತಿಶಿಗೆ ನೋಟಿಸ್​ ಜಾರಿ ಮಾಡಿದ ದೆಹಲಿ ಹೈ ಕೋರ್ಟ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮತ್ತು ಆಪ್​ ನಾಯಕಿ ಅತಿಶಿ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​ ಪ್ರತಿಪಕ್ಷ ನಾಯಕಿ ಹಾಗೂ ಮಾಜಿ ಮುಖ್ಯಮಂತ್ರಿ ಅತಿಶಿ ಅವರಿಗೆ ನೋಟಿಸ್​ ಜಾರಿ ಮಾಡಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಚುನಾವಣಾ ಆಯೋಗ, ದೆಹಲಿ ಪೊಲೀಸರು ಮತ್ತು ಅತಿಶಿ ಚುನಾವಣೆಯಲ್ಲಿ ಗೆಲುವು ಕಂಡ ವಿಧಾನಸಭಾ ಕ್ಷೇತ್ರ ಕಲ್ಕಾಜಿ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ಕುರಿತು ಮುಂದಿನ ವಿಚಾರಣೆಯನ್ನು ಜುಲೈ 30ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

ಎಎಪಿ ನಾಯಕಿ, ದೆಹಲಿ ಮಾಜಿ ಸಿಎಂ ಅತಿಶಿ ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಕಮಲ್​ಜಿತ್​ ಸಿಂಗ್​ ದುಗ್ಗಲ್​ ಮತ್ತು ಆಯುಷ್​ ರಾಣಾ ಎಂಬುವರು ಅತಿಶಿ ಆಯ್ಕೆಯನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಕೀಲರಾದ ಟಿ ಸಿಂಗ್‌ದೇವ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ಈ ಚುನಾವಣೆಯಲ್ಲಿನ ಅತಿಶಿ ಗೆಲುವನ್ನು ಅಸಿಂಧು ಎಂದು ಘೋಷಿಸುವಂತೆ ಕೋರಲಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಇಂದು ಕೋರ್ಟ್​ ಕೈಗೆತ್ತಿಕೊಂಡಿತು.

ಈ ಅರ್ಜಿ ವಿಚಾರಣೆ ವೇಳೆ ಭಾರತೀಯ ಚುನಾವಣಾ ಆಯೋಗ ಮತ್ತು ರಿಟರ್ನಿಂಗ್​ ಅಧಿಕಾರಿಗಳು ಅರ್ಜಿಯಲ್ಲಿ ಪಕ್ಷಗಳಾಗಿ ಸೇರಿಸಿದ್ದಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಿದರು.

ಫೆ. 5ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಫೆ. 8ರಂದು ಹೊರಬಿದ್ದಿತ್ತು. ಕಲ್ಕಾಜಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಅತಿಶಿ ತಮ್ಮ ಎದುರಾಳಿ ಬಿಜೆಪಿಯ ರಮೇಶ್​ ಬಿಧುರಿ ವಿರುದ್ಧ 3,521 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅತಿಶಿ ವಿರುದ್ಧ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಲ್ಕಾಜಿ ಕ್ಷೇತ್ರದ ನಿವಾಸಿಗಳಾಗಿದ್ದಾರೆ.

Category
ಕರಾವಳಿ ತರಂಗಿಣಿ