image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನೀಟ್ ವಿನಾಯತಿ : ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ಎಂ.ಕೆ ಸ್ಟಾಲಿನ್​

ನೀಟ್ ವಿನಾಯತಿ : ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ಎಂ.ಕೆ ಸ್ಟಾಲಿನ್​

ತಮಿಳುನಾಡು: ನೀಟ್​​ಗೆ(neet) ವಿನಾಯಿತಿ ಕೋರಿ ರಾಜ್ಯ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ(central government) ತಿರಸ್ಕಾರ ಮಾಡಿರುವ ಕ್ರಮವನ್ನು ತಮಿಳುನಾಡು ಎಂ.ಕೆ ಸ್ಟಾಲಿನ್(m.k Stalin) ​ ತೀವ್ರವಾಗಿ ಖಂಡಿಸಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ(tamilnadu legislative assembly) ಮಾತನಾಡಿದ ಅವರು, ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುದೀರ್ಘಕಾಲದಿಂದ ಅತ್ಯುತ್ತಮ ಪ್ರದರ್ಶನ ಹೊಂದಿದೆ. ಕ್ಲಾಸ್​ 12ರ ಅಂಕಗಳ ಆಧಾರದ ಮೇಲೆ ಎಲ್ಲರನ್ನು ಒಳಗೊಳ್ಳುವ ನ್ಯಾಯಸಮ್ಮತ ಪ್ರವೇಶಾತಿ ಪ್ರಕ್ರಿಯೆ ಜಾರಿ ಮಾಡುವಂತೆ ರಾಜ್ಯ ಸರ್ಕಾರ ಒತ್ತಿ ಹೇಳಿದ್ದು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶದ ಭರವಸೆ ನೀಡಿದೆ. ಈ ವ್ಯವಸ್ಥೆಯನ್ನು ಮಾಜಿ ಸಿಎಂ ಕೆ ಕರುಣಾನಿಧಿ(karinanidhi) ಪರಿಚಯಿಸಿದ್ದು, ಇದು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ವೃತ್ತಿಪರರಾಗಲು ಅವಕಾಶ ನೀಡುವ ಜೊತೆಗೆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವ ಭರವಸೆ ನೀಡಿತ್ತು.

ನೀಟ್​ ಸಾಮಾಜಿಕ ಮತ್ತು ಆರ್ಥಿಕವಾಗಿ ಬಳಲುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದುಬಾರಿ ಕೋಚಿಂಗ್​ ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಈ ಪರೀಕ್ಷೆಯು ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸೌಲಭ್ಯಗಳನ್ನು ಹೊಂದಿರುವುದರಿಂದ ಅವರಿಗೆ ಮಾತ್ರ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಆದರೆ, ಸೌಲಭ್ಯವಂಚಿತ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗದೇ ಹೋಗುತ್ತಿದೆ ಎಂದು ಸ್ಟಾಲಿನ್​ ಹೇಳಿದ್ದಾರೆ.

ಈ ವಿಚಾರವನ್ನು ತಿಳಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ನಿವೃತ್ತ ನ್ಯಾ. ಎಕೆ ರಾಜನ್​ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಈ ಸಮಿತಿ ಶಿಫಾರಸಿನ ಆಧಾರದ ಮೇಲೆ ತಮಿಳುನಾಡು ವಿಧಾನಸಭೆಯಲ್ಲಿ 2021ರಲ್ಲಿ ನೀಟ್​ನಿಂದ ವಿನಾಯಿತಿ ನೀಡುವ ಯುಜಿ ವೈದ್ಯಕೀಯ ಪದವಿ ಕೋರ್ಸ್​ ಮಸೂದೆಯನ್ನು ಅವಿರೋಧವಾಗಿ ಅಂಗೀಕರಿಸಿತ್ತು. ದೀರ್ಘಕಾಲದ ವಿಳಂಬದ ಬಳಿಕ ರಾಜ್ಯಪಾಲರು ಕೂಡ ಇದಕ್ಕೆ ಸಹಿ ಹಾಕಿ ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಿದ್ದರು.

ರಾಜ್ಯ ಸರ್ಕಾರ ನೀಡಿದ ವಿವರವಾದ ಸ್ಪಷ್ಟನೆ ಹೊರತಾಗಿ ಅನೇಕ ಕೇಂದ್ರ ಸಚಿವರು, ಕೇಂದ್ರ ಸರ್ಕಾರ ಈ ಮಸೂದೆಯನ್ನು ತಿರಸ್ಕರಿಸಿದೆ. ಈ ನಿರ್ಧಾರವನ್ನು ಕಟುವಾಗಿ ಖಂಡಿಸಿರುವ ಸ್ಟಾಲಿನ್​ ಇದು ತಮಿಳುನಾಡು ಚುನಾಯಿತ ವಿಧಾನಸಭೆಗೆ ಅವಮಾನ ಎಂದಿದ್ದಾರೆ. ಅಲ್ಲದೇ ನೀಟ್​ ವಿರುದ್ಧ ಹೋರಾಟ ಇನ್ನೂ ಮುಗಿದಿಲ್ಲ. ಮುಂದಿನ ಕ್ರಮದ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಇದೇ ವೇಳೆ ಸ್ಟಾಲಿನ್ ಕಾನೂನು ಹೋರಾಟದ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

 

Category
ಕರಾವಳಿ ತರಂಗಿಣಿ