ಉತ್ತರಾಖಂಡ : ಉತ್ತರಾಖಂಡದ ಕೇದಾರನಾಥ ಸಮೀಪ ಇಂದು ಹೆಲಿಕಾಪ್ಟರ್ ಪತನಗೊಂಡಿದ್ದು, ಮಗು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 5.30ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಹೆಲಿಕಾಪ್ಟರ್ ಗೌರಿಕುಂಡ್-ಸೋನ್ಪ್ರಯಾಗ್ ಅರಣ್ಯದಲ್ಲಿ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್ 7ರಂದು ಕೇದಾರನಾಥ ಯಾತ್ರೆ ಸಾಗುವ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಬಡಾಸು ಹೆಲಿಪ್ಯಾಡ್ನಿಂದ ಈ ಹೆಲಿಕಾಪ್ಟರ್ ಟೇಕ್ಆಪ್ ಆಗಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರನ್ನು ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯ ಬಡಾಸು ಬಳಿ ಹೆಲಿಪ್ಯಾಡ್ ಸಮೀಪದ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಈ ಹೆಲಿಕಾಪ್ಟರ್ ಕ್ರಿಸ್ಟಲ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಸೇರಿತ್ತು. ಪೈಲಟ್ ಸೇರಿದಂತೆ 6 ಮಂದಿ ಪ್ರಯಾಣಿಸುತ್ತಿದ್ದರು. ಪೈಲಟ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರು ಪಾರಾಗಿದ್ದರು. ಮೇ ತಿಂಗಳ 8ರಂದು ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪೈಲಟ್ ಸೇರಿ 6 ಯಾತ್ರಿಕರು ಸಾವನ್ನಪ್ಪಿದ್ದರು.