image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದ ಮನವಿಯ ಮೇರೆಗೆ ಆಪರೇಷನ್​ ಸಿಂಧೂರಕ್ಕೆ ವಿರಾಮ ಘೋಷಿಸಲಾಯಿತೇ ಹೊರತು ಅಮೆರಿಕದ ಮಧ್ಯಸ್ಥಿಕೆಯಿಂದಲ್ಲ : ಮೋದಿ

ಪಾಕಿಸ್ತಾನದ ಮನವಿಯ ಮೇರೆಗೆ ಆಪರೇಷನ್​ ಸಿಂಧೂರಕ್ಕೆ ವಿರಾಮ ಘೋಷಿಸಲಾಯಿತೇ ಹೊರತು ಅಮೆರಿಕದ ಮಧ್ಯಸ್ಥಿಕೆಯಿಂದಲ್ಲ : ಮೋದಿ

ಕೆನಡಾ : ಭಾರತ ಮತ್ತು ಪಾಕಿಸ್ತಾನದ ನಡುವೆ ಅಮೆರಿಕ ಮಧ್ಯಸ್ಥಿಕೆ ನಡೆಸಿತು ಎಂದು ಹಲವು ಬಾರಿ ಹೇಳಿಕೆ ನೀಡಿದ್ದ ಡೊನಾಲ್ಡ್​​ ಟ್ರಂಪ್ ಅವರಿ​ಗೆ ಪ್ರಧಾನಿ ಮೋದಿ ಸ್ಪಷ್ಟೀಕರಣ ನೀಡಿದ್ದಾರೆ. ಟ್ರಂಪ್ ಜೊತೆಗಿನ ಫೋನ್​ ಸಂಭಾಷಣೆಯಲ್ಲಿ, ಪಾಕಿಸ್ತಾನದ ಮನವಿಯ ಮೇರೆಗೆ ಆಪರೇಷನ್​ ಸಿಂಧೂರಕ್ಕೆ ವಿರಾಮ ಘೋಷಿಸಲಾಯಿತೇ ಹೊರತು ಅಮೆರಿಕದ ಮಧ್ಯಸ್ಥಿಕೆಯಿಂದಲ್ಲ ಎಂದು ಮೋದಿ ತಿಳಿಸಿದ್ದಾರೆ. ಮಂಗಳವಾರ ಟ್ರಂಪ್​ ಅವರಿಗೆ ಕರೆ ಮಾಡಿ 35 ನಿಮಿಷಗಳ ಕಾಲ ಮಾತನಾಡಿದ ಅವರು, ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತ ಆಪರೇಷನ್​ ಸಿಂಧೂರ್​ ಕಾರ್ಯಾಚರಣೆ ನಡೆಸಿತು. ಈ ಕಾರ್ಯಾಚರಣೆ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳು ತಕ್ಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಮನವರಿಕೆ ಮಾಡಿದ್ದಾರೆ.

ಆಪರೇಷನ್​ ಸಿಂಧೂರ್ ಕಾರ್ಯಾಚರಣೆಯ ಬಳಿಕ ಇದೇ ಮೊದಲ ಬಾರಿಗೆ ಟ್ರಂಪ್​ ಮತ್ತು ಮೋದಿ ಮಾತುಕತೆ ನಡೆಸಿದರು. ಭಾರತ ಯಾವುದೇ ಮೂರನೇ ವ್ಯಕ್ತಿ ಮಧ್ಯಸ್ಥಿಕೆಯನ್ನು ಸ್ವೀಕರಿಸುವುದಿಲ್ಲ. ಭವಿಷ್ಯದಲ್ಲೂ ಈ ರೀತಿಯ ಮಧ್ಯಸ್ಥಿಕೆಗೆ ಅವಕಾಶ ನೀಡುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್​ ಮಿಸ್ತಿ ಮಾಹಿತಿ ನೀಡಿದ್ದಾರೆ. ಈ ಸಂಭಾಷಣೆಯ ಸಂದರ್ಭದಲ್ಲಿ ಟ್ರಂಪ್,​ ಜಿ7 ಸಭೆಯ ಬಳಿಕ ಕೆನಡಾದಿಂದ ಮರಳುವಾಗ ಅಮೆರಿಕಕ್ಕೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ ನೀಡಿದ್ದರು. ಆದರೆ, ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಈ ಆಹ್ವಾನ ಸ್ವೀಕರಿಸಲಿಲ್ಲ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಭಾಗಿಯಾಗುವಂತೆ ಟ್ರಂಪ್​ ಅವರಿಗೆ ಮೋದಿ ಆಹ್ವಾನ ನೀಡಿದರು ಎಂದು ಅವರು ತಿಳಿಸಿದರು. ಏಪ್ರಿಲ್​ 22ರಂದು ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಡೆದಾಗ ಟ್ರಂಪ್​ ಕರೆ ಮಾಡಿ, ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿ, ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದ್ದರು.

Category
ಕರಾವಳಿ ತರಂಗಿಣಿ