image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ:ಸಿಎಂ ಡಿ ಕೆ ಶಿವಕುಮಾರ್

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ:ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 

ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ  ಅವರು ಗೃಹ ಕಚೇರಿ ಕೃಷ್ಣಾದಲ್ಲಿ  ಶುಕ್ರವಾರ ಸಿಎಂ‌ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. "ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಕ್ರಿಯವಾಗಿ  ಪಾಲ್ಗೊಂಡಿದ್ದೆ" ಎಂದರು

ಸಿಂಧ್ಯಾ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಗೆ  ಇಂಜಿನಿಯರ್ ಹಾಗೂ ವೈದ್ಯಕೀಯ ಸೀಟುಗಳ ಮೀಸಲಾತಿಯನ್ನು ಏರಿಕೆ,  ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆಗೆ ಮನವಿ ಸಲ್ಲಿಸಿದರು.ಧಾರವಾಡ ಮತ್ತು ವಿಜಯಪುರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್  ಸ್ಥಳದ ಗುತ್ತಿಗೆ ಅವಧಿ ಮುಗಿದಿದ್ದು ಅವಧಿಯನ್ನು ಮುಂದುವರೆಸಬೇಕೆಂದು ಕೋರಿದರು.

Category
ಕರಾವಳಿ ತರಂಗಿಣಿ