ಬೆಂಗಳೂರು : ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ. ಹಾಲಿ ಮುಖ್ಯಸ್ಥ ಎಸ್.ಸೋಮನಾಥ್ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಜನವರಿ 14ರಂದು ನಿವೃತ್ತರಾಗಲಿದ್ದಾರೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್ಪಿಎಸ್ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರು ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷ ಹುದ್ದೆಯಲ್ಲಿರುತ್ತಾರೆ.
ನಾರಾಯಣನ್ ಅವರು ಆದಿತ್ಯ ಬಾಹ್ಯಾಕಾಶ ನೌಕೆ ಮತ್ತು GSLV MK-III ಮಿಷನ್ನಂತಹ ಪ್ರಮುಖ ಯೋಜನೆಗಳಿಗೆ ಗಮನಾರ್ಹ ಕೊಡುಗೆ ನೀಡಿದವರು. ಇವರ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ 'ಶ್ರೀ ಪ್ರಶಸ್ತಿ' ಮತ್ತು IIT ಖರಗ್ಪುರದಿಂದ 'ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ' ನೀಡಿ ಗೌರವಿಸಲಾಗಿತ್ತು.