image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಅವರಿಂದ ಸ್ವಾಮಿತ್ವ ಯೋಜನೆ ಅಡಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ಪ್ರಧಾನಿ ಮೋದಿ ಅವರಿಂದ ಸ್ವಾಮಿತ್ವ ಯೋಜನೆ ಅಡಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ನವದೆಹಲಿ: ಭಾರತದ ಗ್ರಾಮಗಳ ಸಬಲೀಕರಣ ಪ್ರಯತ್ನಗಳಲ್ಲಿ ಪ್ರಮುಖವಾಗಿರುವ 'ಸ್ವಾಮಿತ್ವ' ಯೋಜನೆ ಅಡಿ ಪ್ರಧಾನಿ ನರೇಂದ್ರ ಮೋದಿ ಅವರು 65 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್​​ ವಿತರಿಸಲಿದ್ದಾರೆ. ಯೋಜನೆ ಫಲಾನುಭವಿಗಳಿಗೆ ಕಾರ್ಡ್​ ಹಂಚಲಿದ್ದು, ಅವರೊಂದಿಗೆ ಮಾತುಕತೆ ನಡೆಸಿ, ದೇಶವನ್ನು ಉದ್ದೇಶಿ ಮೋದಿ ಮಾತನಾಡಿದರು.

ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​​ ಸೇರಿದಂತೆ 10 ರಾಜ್ಯಗಳ 50 ಸಾವಿರಕ್ಕೂ ಹೆಚ್ಚು ಗ್ರಾಮದ ಆಸ್ತಿ ಮಾಲೀಕರಿಗೆ ಕಾರ್ಡ್​ ವಿತರಣೆ ಮಾಡಲಾಗುವುದು. ಸ್ವಾಮಿತ್ವ ಯೋಜನೆ ಅಡಿ 2.25 ಕೋಟಿ ಆಸ್ತಿ ಕಾರ್ಡ್​ ವಿತರಣೆಗೆ ಸಿದ್ಧತೆ ನಡೆಸಲಾಗಿದ್ದು, ಒಂದೇ ದಿನದಲ್ಲಿ 65 ಲಕ್ಷ ಕಾರ್ಡ್​​ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಸ್ವಾಮಿತ್ವ (ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ಮ್ಯಾಪಿಂಗ್) ಯೋಜನೆಯನ್ನು 2020ರ ಏಪ್ರಿಲ್​ 4ರಂದು ಪ್ರಾರಂಭ ಮಾಡಲಾಗಿದ್ದು, ಗ್ರಾಮ ವಾಸಿಗಳಿಗೆ ತಮ್ಮ ಆಸ್ತಿ ಹಕ್ಕಿನ ಮಾಲೀಕತ್ವ ನೀಡುವ ಗುರಿಯನ್ನು ಇದು ಹೊಂದಿದೆ. ಈ ಯೋಜನೆ ಅಡಿ, ಆಸ್ತಿ ಮಾಲೀಕರಿಗೆ ಹಕ್ಕಿನ ದಾಖಲೆಯನ್ನು ನೀಡಲಾಗುವುದು. ಈ ಆಸ್ತಿ ಕಾರ್ಡ್​ ಅನ್ನು ಸುಧಾರಿತ ಡ್ರೋನ್​ ಮತ್ತು ಜಿಐಎಸ್​ ತಂತ್ರಜ್ಞಾನದ ಮೂಲಕ ಮಾಪನ ಮಾಡಲಾಗುವುದು ಎಂದರು.

ಇದು ಪಂಚಾಯತ್​ ರಾಜ್​ ಸಚಿವಾಲಯದ ಉಪಕ್ರಮವಾಗಿದ್ದು, ಅದರ ಮೂಲಕ ಇದನ್ನು ಜಾರಿ ಮಾಡಲಾಗುತ್ತಿದೆ. ಇದು ಗ್ರಾಮೀಣ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ಭೂ ಮಾಲೀಕತ್ವ ನೀಡುವ ಮೂಲಕ ಆಡಳಿತದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ