image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಕ್ಫ್​ ತಿದ್ದುಪಡಿ ಮಸೂದೆಗೆ ಎನ್​ಡಿಎ ಮಿತ್ರಪಕ್ಷಗಳ ಬೆಂಬಲ

ವಕ್ಫ್​ ತಿದ್ದುಪಡಿ ಮಸೂದೆಗೆ ಎನ್​ಡಿಎ ಮಿತ್ರಪಕ್ಷಗಳ ಬೆಂಬಲ

ಶ್ರೀನಗರ : ಭಾರೀ ಚರ್ಚಿತ ವಕ್ಫ್​ ತಿದ್ದುಪಡಿ ಮಸೂದೆಗೆ ಎನ್​ಡಿಎ ಮಿತ್ರಪಕ್ಷಗಳೆಲ್ಲವೂ ಬೆಂಬಲ ನೀಡಿವೆ. ಮುಸ್ಲಿಮ್​ ನಾಯಕರು ಸಾಮಾಜಿಕ ಒತ್ತಡದ ಹಿನ್ನೆಲೆ ಖಾಸಗಿಯಾಗಿ ಬೆಂಬಲ ಸೂಚಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ ವಕ್ಫ್​ ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಎನ್​ಡಿಎ ಕೂಟದ ಪ್ರಮುಖ ಮಿತ್ರರಾದ ಬಿಹಾರ ಮುಖ್ಯಮಂತ್ರಿ ನಿತೀಶ್​ಕುಮಾರ್​ ನೇತೃತ್ವದ ಜೆಡಿಯು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)ಗಳು ತಮ್ಮ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದೆ.

ಈ ಬಗ್ಗೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕಿರಣ್​ ರಿಜಿಜು ಅವರು, ವಕ್ಫ್ ಮಸೂದೆ ತಿದ್ದುಪಡಿಯ ವಿರುದ್ಧ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ. ಈ ವಿಚಾರದಲ್ಲಿ ಎನ್​ಡಿಎ ಕೂಟ ಒಗ್ಗಟ್ಟಾಗಿದೆ ಎಂದು ಸ್ಪಷ್ಟಪಡಿಸಿದರು.

ನಿತೀಶ್​ಕುಮಾರ್​ ಮತ್ತು ಚಂದ್ರಬಾಬು ನಾಯ್ಡು ಅವರು ಮಸೂದೆ ಕುರಿತು ತಮ್ಮ ಬೆಂಬಲದ ಅಭಿಪ್ರಾಯ ತಿಳಿಸಿದ್ದಾರೆ. ಸಂಸತ್ತಿನಲ್ಲಿ ಮಸೂದೆ ಮಂಡಿಸುವ ಮೂಲಕ ವಕ್ಫ್​ ಸಂಸ್ಥೆಯನ್ನು ಪಾರದರ್ಶಕಗೊಳಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ವಿಶ್ವದಲ್ಲಿಯೇ ಅತಿದೊಡ್ಡ ವಕ್ಫ್ ಆಸ್ತಿ ಭಾರತದಲ್ಲಿದೆ. ಆದರೆ, ಅದು ಬಡ ಮುಸ್ಲಿಮರು, ಮಹಿಳೆಯರು ಮತ್ತು ಮಕ್ಕಳಿಗೆ ಪ್ರಯೋಜನ ನೀಡುತ್ತಿಲ್ಲ" ಎಂದು ಆರೋಪಿಸಿದರು.

Category
ಕರಾವಳಿ ತರಂಗಿಣಿ