image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿವಿಗಳ ಸಾಧಕ - ಬಾಧಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತದೆ : ಡಿ ಕೆ ಶಿ

ವಿವಿಗಳ ಸಾಧಕ - ಬಾಧಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತದೆ : ಡಿ ಕೆ ಶಿ

ಬೆಂಗಳೂರು : ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ - ಬಾಧಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತದೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ, ಡಿಸಿಎಂ ಡಿ. ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಳ್ಳುತ್ತಾ, ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ ನಾರಾಯಣ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ, ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಂಡು ನೋಡುವುದಾದರೆ, ವಿದ್ಯಾರ್ಥಿಗಳು ಮೈಸೂರು ವಿವಿ ಹೆಸರಲ್ಲಿ ಪದವಿ ಪಡೆಯುದಕ್ಕೂ, ಬೇರೆ ಇತರ ವಿವಿ ಹೆಸರಲ್ಲಿ ಪದವಿ ಪ್ರಮಾಣಪತ್ರ ಪಡೆಯುವುದಕ್ಕೆ ಎಷ್ಟು ವ್ಯತ್ಯಾಸವಿದೆ ಎಂದು ವಿವರಿಸಿದರು.

ಅವರ ಸಹೋದರಿಯ ಪುತ್ರ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಮುಂದಾದಾಗ, ಅವರು ಪಿಇಎಸ್ ಶಿಕ್ಷಣ ಸಂಸ್ಧೆಯಲ್ಲಿ ಓದಿದ್ದರು. ಅದು ಉತ್ತಮ ಸಂಸ್ಥೆಯಾದರೂ ಅದು ಅಧಿಕೃತ ವಿವಿಯಲ್ಲ ಎಂಬ ಕಾರಣಕ್ಕೆ ಅವರಿಗೆ ವಿದೇಶಿ ವಿವಿಯಲ್ಲಿ ಪ್ರವೇಶಾತಿ ನಿರಾಕರಿಸಲಾಗಿತ್ತು. ಎಸ್. ಎಂ ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅನೇಕ ಪ್ರಯತ್ನಗಳನ್ನು ಮಾಡಿ ಕೊನೆಗೆ ಅಲ್ಲಿ ಪ್ರವೇಶಾತಿ ಸಿಕ್ಕಿತು. ಇದು ಕೇವಲ ಒಂದು ಉದಾಹರಣೆಯಷ್ಟೇ. ಬೆಂಗಳೂರು ವಿವಿ, ಮೈಸೂರು ವಿವಿ ಪ್ರತಿಷ್ಠಿತ ವಿವಿಗಳಾಗಿವೆ. ಈ ವಿವಿಗಳ ಜಾರಿ ಕಾರ್ಯಸಾಧುವಲ್ಲ ಎಂದು ವಿಲೀನ ಮಾಡುತ್ತಿದ್ದೇವೆಯಷ್ಟೇ. ಈ ವಿಚಾರವಾಗಿ ನಾವು ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿದ್ದೇವೆ ಎಂದು ಹೇಳಿದರು.

ಮಾತು ಮುಂದುವರಿಸಿದ ಶಿವಕುಮಾರ್ ಅವರು, “ನನಗೆ ಶಿಕ್ಷಣ ಕ್ಷೇತ್ರದ ಮೇಲೆ ಹೆಚ್ಚು ಆಸಕ್ತಿ ಇದೆ. ಈ ವಿಚಾರದಲ್ಲಿ ನೀವು ಉತ್ತಮ ಸಲಹೆಗಳನ್ನು ಕೊಟ್ಟರೆ ನಾವು ಅದನ್ನು ಪರಿಗಣಿಸುತ್ತೇವೆ. ಈಗ ನಿರ್ಮಿಸಿರುವ ಹೊಸ ವಿವಿಗಳಲ್ಲಿ ಹೋಗಿ ಕೆಲಸ ಮಾಡಲು ಯಾವುದೇ ಪ್ರಾಧ್ಯಾಪಕರು ಮುಂದೆ ಬರುತ್ತಿಲ್ಲ. ಒಬ್ಬರನ್ನು ಉಪಕುಲಪತಿಗಳನ್ನಾಗಿ ಹಾಗೂ ಮತ್ತೊಬ್ಬರನ್ನು ರಿಜಿಸ್ಟ್ರಾರ್ ಮಾಡಿದರೆ ಅದು ವಿಶ್ವವಿದ್ಯಾಲಯವಾಗುತ್ತದೆಯೇ? ಎಂದು ಪ್ರಶ್ನಿಸಿದರು.

ನೀವುಗಳು ವಿವಿಯನ್ನು ವಿಭಾಗ ಮಾಡಿದ್ದೀರಿ. ನಾವು ಆ ವಿವಿಗಳನ್ನು ವಜಾಗೊಳಿಸಲು ಆಗುವುದಿಲ್ಲ. ಹೀಗಾಗಿ ನಾವು ಅವುಗಳನ್ನು ಪ್ರಮುಖ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ. ನಮ್ಮ ಹಾಗೂ ನಿಮ್ಮ ನಡುವೆ ಇರುವ ವ್ಯತ್ಯಾಸ ಎಂದರೆ ನೀವು ಜನರನ್ನು ಒಡೆಯುತ್ತೀರಿ, ನಾವು ಜನರನ್ನು ಒಟ್ಟುಗೂಡಿಸುತ್ತೇವೆ ಎಂದು ಟೀಕಿಸಿದರು.

Category
ಕರಾವಳಿ ತರಂಗಿಣಿ