image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಭೇಟಿ ನೀಡಿದ ನರೇಂದ್ರ ಮೋದಿ

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಭೇಟಿ ನೀಡಿದ ನರೇಂದ್ರ ಮೋದಿ

 ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನಾಗ್ಪುರದ ರೇಶಿಮ್​ ಭಾಗ್​ನಲ್ಲಿರುವ ಆರ್​ಎಸ್​ಎಸ್​ ಪ್ರಧಾನ ಕಚೇರಿ (ಡಾ.ಹೆಗಡೇವಾರ್​ ಸ್ಮೃತಿ ಮಂದಿರ)ಗೆ ಇಂದು ಬೆಳಗ್ಗೆ ಭೇಟಿ ನೀಡಿದರು.

ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ ಬಲಿರಾಮ್​ ಹೆಗಡೇವಾರ್​ ಹಾಗೂ ಎರಡನೇ ಸರಸಂಘಚಾಲಕ್​ ಎಂ.ಎನ್​.ಗೋಲ್ವಾಲ್ಕರ್​ ಅವರ ಸ್ಮಾರಕಗಳಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಗ್ಪುರದವರೇ ಆದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು.

ಬಿಜೆಪಿ ಹಾಗೂ ಆರ್​ಎಸ್​ಎಸ್​ ನಡುವೆ ಸಂಬಂಧ ಸರಿ ಇಲ್ಲ ಎನ್ನುವ ಊಹಾಪೋಹಗಳ ನಡುವೆ, ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.ಸ್ಮಾರಕದಲ್ಲಿರುವ ಸ್ಮೃತಿ ಭವನದಲ್ಲಿ ಪ್ರಧಾನಿ ಮೋದಿ ಆರ್​ಎಸ್​ಎಸ್​ ಪದಾಧಿಕಾರಿಗಳನ್ನು ಭೇಟಿ ಮಾಡಿ ಅವರೊಂದಿಗೆ ಫೋಟೋ ತೆಗೆಸಿಕೊಂಡರು.ಅಲ್ಲಿದ್ದ ಸಂದೇಶ ಪುಸ್ತಕದಲ್ಲಿ, "ಈ ಸ್ಮಾರಕವನ್ನು ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಸಂಘಟನೆಯ ಮೌಲ್ಯಗಳಿಗೆ ಸಮರ್ಪಿಸಲಾಗಿದೆ" ಎಂದು ಹಿಂದಿಯಲ್ಲಿ ಮೋದಿ ಅವರು ಬರೆದರು.

Category
ಕರಾವಳಿ ತರಂಗಿಣಿ