ಬೆಳ್ತಂಗಡಿ: ಉಜಿರೆಯಲ್ಲಿ ಸೌಜನ್ಯ ಹೋರಾಟಗಾರ ಮಹೇಶ್ ತಿಮರೋಡಿ ಅವರ ಚಾಲೆಂಜ್ ಸ್ವೀಕರಿಸಿ ಉಜಿರೆಗೆ ಆಗಮಿಸಿದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಪೊಲೀಸರು ದಾರಿ ಮಧ್ಯೆ ನಿರ್ಬಂಧದ ತಡೆಯನ್ನುಂಟು ಮಾಡಿದ್ದಾರೆ. ಉಜಿರೆಯಲ್ಲಿ ನಡೆಯಲಿದ್ದ ಶ್ರೀರಾಮೋತ್ಸವ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ದಿಕ್ಕೂಚಿ ಭಾಷಣ ಮಾಡಲಿದ್ದು, ಇದೇ ಕಾರ್ಯಕ್ರಮಕ್ಕೆ ಆಗಮಿಸಲು ಪುನೀತ್ ಕೆರೆಹಳ್ಳಿ ಸಹ ಸಿದ್ಧತೆ ನಡೆಸಿದ್ದರು.
ಸೌಜನ್ಯ ಪರ ಹೋರಾಟಗಾರರಿಂದ ಪುನೀತ್ ಕೆರೆಹಳ್ಳಿ ಆಗಮನಕ್ಕೆ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಪುನೀತ್ ಆಗಮಿಸಿದ್ರೆ ಉಜಿರೆಯಲ್ಲಿ ಶಾಂತಿ ಕದಡುವ ಸಾಧ್ಯತೆಯೊಂದಿಗೆ, ಮಹೇಶ್ ಶೆಟ್ಟಿ ತಿಮರೋಡಿ ಬಣ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ಸಂಘರ್ಷ ಉಂಟಾಗುವ ಸಾಧ್ಯತೆ ಕೂಡಾ ಇರುವ ಹಿನ್ನೆಲೆಯಲ್ಲಿ ಕ್ರಮವಾಗಿ ಪುನೀತ್ ಕೆರೆಹಳ್ಳಿಯನ್ನು
ದ.ಕ ಜಿಲ್ಲೆ ಪ್ರವೇಶಿಸದಂತೆ ದ.ಕ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. ಪುನೀತ್ ಕೆರೆಹಳ್ಳಿ ಆಗಮನದಿಂದ ಜಿಲ್ಲೆಯಲ್ಲಿ ಶಾಂತಿ ಕದಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.