image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತದ ವೀರ ಯೋಧರ ಪ್ರತಿಕಾರದ ಮೊದಲ ಹೆಜ್ಜೆಗೆ ಉಗ್ರರ ಅಡಗುತಾಣ ಉಡೀಸ್ : ಹೆಣ್ಣು ಮಕ್ಕಳ ಹಣೆಯ ಕುಂಕುಮದ ಮಹತ್ವ ಸಾರಲಿದೆ ಆಪರೇಷನ್ ಸಿಂಧೂರ್

ಭಾರತದ ವೀರ ಯೋಧರ ಪ್ರತಿಕಾರದ ಮೊದಲ ಹೆಜ್ಜೆಗೆ ಉಗ್ರರ ಅಡಗುತಾಣ ಉಡೀಸ್ : ಹೆಣ್ಣು ಮಕ್ಕಳ ಹಣೆಯ ಕುಂಕುಮದ ಮಹತ್ವ ಸಾರಲಿದೆ ಆಪರೇಷನ್ ಸಿಂಧೂರ್

ನವದೆಹಲಿ: ಕಾಶ್ಮೀರಕ್ಕೆ ಬಂದಿದ್ದ ಭಾರತದ 26 ಅಮಾಯಕ ಪ್ರವಾಸಿಗರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು, ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಮೇ 7 ರ (ಇಂದು) ಬುಧವಾರ ಮುಂಜಾನೆ 1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ.

ಪಾಕಿಸ್ತಾನದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡೈ, ಗುಲ್ಪುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ ಸಿಯಾಲೋಟ್ ಮತ್ತು ಮುಜಫರಾಬಾದ್ ಮೇಲೆ ನಿಖರವಾದ ದಾಳಿಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಅಡಗುತಾಣಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅದಿಕೃತವಾಗಿ ಇಂದಿ 10ಗಂಟಗೆ  ಸೇನಾ ಮುಖ್ಯಸ್ಥರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಲಿದ್ದಾರೆ.

ಅಪರೇಷನ್ ಸಿಂದೂರ್ ನ ವಿಡಿಯೋಗಾಗಿ  ಕ್ಲಿಕ್ ಮಾಡಿ

ಆಪರೇಷನ್‌ ಸಿಂಧೂರ್ ಹೆಸರಿನಲ್ಲಿ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಭಾರತದ ದಾಳಿಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ 6 ಸ್ಥಳಗಳು ದಾಳಿಗೊಳಗಾಗಿದ್ದು 3 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ. 

ಪಾಕ್ ಆಕ್ರಮಿತ ಕಾಶ್ಮೀರದ ಕೋಟಿ, ಮುಜಫರಾಬಾದ್ ಮತ್ತು ಬಹವಾಲ್ಪುರದಲ್ಲಿ ಭಾರತೀಯ ಸೇನೆ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ಇನ್ನು ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಂಡಿಯನ್ ಆರ್ಮಿ "ನ್ಯಾಯದಾನ ಆಗಿದೆ. ಜೈ ಹಿಂದ್ ಎಂದು ಬರೆದುಕೊಂಡಿದೆ.

ಆಪರೇಷನ್ ಸಿಂದೂರ್ ನ ಮತ್ತೊಂದು ವಿಡಿಯೋಗಾಗಿ ಕ್ಲಿಕ್ ಮಾಡಿ

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಏಕಾಏಕಿ ದಾಳಿಯಲ್ಲಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ಮಳೆಗೈದು ಹತ್ಯೆ ಮಾಡಲಾಗಿತ್ತು. ನಯನ ಮನೋಹರ ದೃಶ್ಯ ಕಣ್ಣುಂಬಿಕೊಳ್ಳಲು ಪಹಲ್ಲಾಮ್‌ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಉಗ್ರಗಾಮಿಗಳ ದಾಳಿಯಲ್ಲಿ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸೇರಿದಂತೆ ಪಹಲ್ಲಾಮ್ ಪೈಶಾಚಿಕ ದಾಳಿಯಲ್ಲಿ ಬೆಂಗಳೂರಿನ ಮತ್ತಿಕೆರೆಯಲ್ಲಿ ವಾಸವಾಗಿದ್ದ ಭರತ್ ಭೂಷಣ್ (41) ಹಾಗೂ ಬೆಂಗಳೂರಿನ ಮಧುಸೂದನ್ ಸೋಮಿಶೆಟ್ಟಿ ಎಂಬ ಮೂವರು ಕನ್ನಡಿರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಈ ಆಗಂತುಕರ ದಾಳಿಗೆ ಒಟ್ಟು 26 ಮಂದಿಯ ಜೀವ ಹೋಗಿತ್ತು. ಇದೇ ದಾಳಿಯಲ್ಲಿ ವಾಯುಸೇನೆ ಅಧಿಕಾರಿ ವಿನಯ್ ನರವಾಲ್‌ ಸಾವನನ್ನಿದ್ದರು. ಕೈ ತುಂಬಾ ಬಳೆ ತೊಟ್ಟು ತನ್ನ ಗಂಡನ ಶವದ ಮುಂದೆ ಕಂಗೆಟ್ಟು ಕುಳಿತಿದ್ದ ವಿನಯ್ ಪತ್ನಿ ಹಿಮಾನ್ಶಿಯ ಫೋಟೋ ಪಹಲ್ಗಾಮ್‌ ದಾಳಿಯ ಕ್ರೂರತೆಗೆ ಸಾಕ್ಷಿಯಾಗಿ ವೈರಲ್ ಆಗಿತ್ತು. 

ಇಡೀ ಘಟನೆಯಲ್ಲಿ ಉಗ್ರಗಾಮಿಗಳು ಹೆಣ್ಣು ಮಕ್ಕಳ ಹಣೆಯ ಕುಂಕುಮವನ್ನು ಟಾರ್ಗೆಟ್ ಮಾಡಿದ್ದರು. ಭಯೋತ್ಪಾದಕರ ದಾಳಿಯಲ್ಲಿ ಮನೆಯೊಡೆಯನನ್ನು ಕಳೆದುಕೊಂಡ ಹೆಣ್ಣುಮಕ್ಕಳ ಹಣೆಯಲ್ಲಿನ ಸಿಂಧೂರವೂ ಅಳಿಸಿಹೋಗಿದೆ. ಹೆಣ್ಣು ಮಕ್ಕಳ ಕುಂಕುಮ ಭಾಗ್ಯ ಕಸಿದ ಉಗ್ರರ ಹೇಯ ಕೃತ್ಯದ ವಿರುದ್ಧ ಸಿಡಿದೆದ್ದ ಭಾರತ ಇದೇ ಕಾರಣಕ್ಕೆ ಪಹಲ್ಲಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ಪತ್ರಿದಾಳಿಗೆ "ಆಪರೇಷನ್ ಸಿಂಧೂರ್" ಎಂದು ಹೆಸರಿಡಲಾಗಿದೆ ಎನ್ನುವುದು ಜಗಜ್ಜಾಹಿರಾಗಿದೆ.

Category
ಕರಾವಳಿ ತರಂಗಿಣಿ