image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆ ನಿಷೇಧ: ಸಿಎಂ ಸಿದ್ಧರಾಮಯ್ಯ ಸೂಚನೆ

ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆ ನಿಷೇಧ: ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಕರ್ನಾಟಕದ ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿರುವಂತ ಅವರು, ಕೂಡಲೇ ಅಗತ್ಯ ಕ್ರಮಮವಹಿಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಬರೆದಿರುವಂತ ಪತ್ರದಲ್ಲಿ ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿರುತ್ತದೆ ಎಂದಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ ಎಂದಿದ್ದಾರೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಈ ಮನವಿ ಪತ್ರದ ಮೇಲೆ ಸಿಎಂ ಸಿದ್ಧರಾಮಯ್ಯ ಅವರು, ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಜರೂರಾಗಿ ಜರುಗಿಸುವುದು ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ.

Category
ಕರಾವಳಿ ತರಂಗಿಣಿ