image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರೆದರೆ ಸೇರ್ಪಡೆಯಾಗಲು ತಯಾರಿದ್ದೇನೆ-ರಘುಪತಿ ಭಟ್

ಕರೆದರೆ ಸೇರ್ಪಡೆಯಾಗಲು ತಯಾರಿದ್ದೇನೆ-ರಘುಪತಿ ಭಟ್

ಉಡುಪಿ: ಬಿಜೆಪಿಗೆ ಕರೆದರೆ ಸೇರ್ಪಡೆಯಾಗಲು ತಯಾರಿದ್ದೇನೆ. ಆದರೆ ಬಿಜೆಪಿ ನಾಯಕರು ಕರೆದಿಲ್ಲ, ನನ್ನ ಹತ್ತಿರ ಮಾತು ಕೂಡ ಆಡಿಲ್ಲ. ಈಗ ನನ್ನ ಅವಶ್ಯಕತೆ ಅವರಿಗೆ ಇಲ್ಲ ಅನಿಸಿರಬೇಕು. ಹೀಗಾಗಿ ನನ್ನಷ್ಟಕ್ಕೆ ನಾನು ಇದ್ದೇನೆ. ರಾಜಕೀಯ ಉದ್ದೇಶದಿಂದ ಕಾಂಗ್ರೆಸ್ ಪಕ್ಷದವರನ್ನು ಭೇಟಿಯಾಗಿಲ್ಲ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.  ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಾವು ಶಾಸಕರಾಗಿದ್ದಾಗ ಆರಂಭಿಸಿದ್ದ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ತಾವು ಬಿಜೆಪಿಯಿಂದ ಅಮಾನತಾಗುವಂತೆ ಮಾಡಿದ್ದಾರೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಿಡಿಕಾರಿದರು. ನಗರದ ಕಲ್ಸಂಕ ಟ್ರಾಫಿಕ್ ಜಂಕ್ಷನ್ ನಾನು ಶಾಸಕನಾಗಿದ್ದಾಗ ಆರಂಭಿಸಿದ ಯೋಜನೆ ಎನ್ನುವ ಕಾರಣಕ್ಕೆ ಶಾಸಕರು ಅದಕ್ಕೆ ಅಡ್ಡಗಾಲು ಹಾಕಿದ್ದಾರೆ. ಶಾಸಕರ ಕಚೇರಿಯಲ್ಲಿದ್ದ ನನ್ನ ಫೋಟೋಗಳನ್ನು ತೆಗೆಸಿದ್ದಾರೆ. ಪಕ್ಷದ ಕಾರ್ಯಕ್ರಮಗಳಿಂದ ನನ್ನನ್ನು ದೂರ ಇಡುವಂತೆ ಮಾಡಿದ್ದಾರೆ, ನನ್ನ ವೈಯಕ್ತಿಕ ವ್ಯವಹಾರಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಬೇಸರಿಸಿದರು. ನಾನು ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಕ್ಕೆ ಯಶ್‌ಪಾಲ್ ಅವರೇ ಕಾರಣ. ನಾನು ಮೂರು ಬಾರಿ ಶಾಸಕನಾಗಿದ್ದವನು, ಬಿಜೆಪಿ ನನ್ನನ್ನು ಯಾವ ರೀತಿ ನೋಡಿಕೊಳ್ಳುತ್ತಿದೆ ಎಂದು ಬೇಸರವಾಗುತ್ತಿದೆ. ಬಿಜೆಪಿ ಇತರ ನಾಯಕರು ಕೂಡ ಈ ಬಗ್ಗೆ ಯೋಚನೆ ಮಾಡಿಲ್ಲ, ಉಡುಪಿಯಲ್ಲಿ ಬಿಜೆಪಿ ಬೆಳವಣಿಗೆಯಲ್ಲಿ ನನ್ನ ಪಾತ್ರ ಇಲ್ವಾ? ಎಂದು ಅಳಲು ತೋಡಿಕೊಡರು. ನಾನು ಯಾವುದೇ ಯೋಜನೆಗಳಿಂದ ಕಿಕ್ ಬ್ಯಾಕ್ ಪಡೆದಿಲ್ಲ ಎಂದ ಅವರು ಇಂತಹ ಆರೋಪಗಳಿಗೆ ನಾನು ಹೆದರಿ ಕುಳಿತುಕೊಳ್ಳುವವನಲ್ಲ, ನಾನು ನನ್ನ ವ್ಯವಹಾರದಲ್ಲಿ ಬ್ಯುಸಿಯಾಗಿದ್ದೇನೆ, ಕಾಪು ಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಬ್ಯುಸಿಯಾಗಿದ್ದೇನೆ ಎಂದರು.

Category
ಕರಾವಳಿ ತರಂಗಿಣಿ