image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಭೀಮ ಸಂಗಮ - ಸಾಮರಸ್ಯದ ಕಾರ್ಯಕ್ರಮ

ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಭೀಮ ಸಂಗಮ - ಸಾಮರಸ್ಯದ ಕಾರ್ಯಕ್ರಮ

ಮಂಗಳೂರು: ಭಾರತೀಯ ಜನತಾ ಪಕ್ಷದ ವರಿಷ್ಠರ ಆಶಯದಂತೆ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ವಿಧಾನಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಮನೆಯಲ್ಲಿ ಭೀಮಸಂಗಮ ಕಾರ್ಯಕ್ರಮ ಜರಗಿತು.

ದಲಿತ ಸಮಾಜದ ಸುಮಾರು 120 ದಂಪತಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,   ಕಿಶೋರ್ ಕುಮಾರ್, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಭಟ್, ಗ್ರಾಮಾಂತರ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಉಜಿರೆಮಾರ್ ಇವರನ್ನು ಕಾಲು ತೊಳೆದು  ಬರಮಾಡಿಕೊಂಡರು.

ಮುತ್ತೈದೆಯರು ಅವರಿಗೆ ಬಾಗಿನ ಸಮರ್ಪಿಸಿ ಆರತಿ ಬೆಳಗಿದರು. ಸಾಮರಸ್ಯದ ಕುರಿತಾಗಿ ಶ್ರೀ ರವೀಂದ್ರ ಪುತ್ತೂರು ಹಾಗೂ ಶ್ರೀ ಶಿವ ಪ್ರಸಾದ ಇವರು ಉಪನ್ಯಾಸವನ್ನು ನಡೆಸಿಕೊಟ್ಟರು. ನಂತರ ಸಹಭೋಜನ ಕಾರ್ಯಕ್ರಮದಲ್ಲಿ ಜಾತಿ ಮತಗಳ ಸೀಮೆಯನ್ನು ಮೀರಿ ನಿಂತು ಎಲ್ಲರೂ ಊಟ ಮಾಡಿದರು, ಊಟವನ್ನು ಬಡಿಸಿದರು.

ಜಾತಿಯ ಕಾರಣದಿಂದಾಗಿರುವ ಮೇಲರಿಮೆ, ಕೀಳರಿಮೆಗಳು ಇಲ್ಲಿ ಮಾಯವಾಗಿದ್ದವು. ಅಂಬೇಡ್ಕರ್ ಅವರ ಆಶಯದಂತೆ ಹಾಗೂ ಪಕ್ಷದ ವರಿಷ್ಠರ ಕಲ್ಪನೆಯಂತೆ ಒಂದು ಅದ್ಭುತ ಸಾಮರಸ್ಯದ ಕಾರ್ಯಕ್ರಮ ಇಲ್ಲಿ ಮೇಳೈಸಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಭಟ್, ಗ್ರಾಮಾಂತರ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಉಜಿರೆಮಾರ್, ಶ್ರೀ ರವೀಂದ್ರ ಪುತ್ತೂರು, ಜಯಲಕ್ಷ್ಮಿ ಶರ್ಗಿತ್ತಾಯ ಮಹಿಳಾ ಮಂಡಳ ಪ್ರಧಾನ ಕಾರ್ಯದರ್ಶಿ ಮುಂತಾದ ಪ್ರಮುಖರು ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ