image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಜಾತಿ ತಾರತಮ್ಯ ಆರೋಪ : ಐಐಎಂ-ಬಿ ನಿರ್ದೇಕ ರಿಷಿಕೇಶ್ ಟಿ. ಕೃಷ್ಣನ್ ಹಾಗೂ ಏಳು ಮಂದಿಯ ವಿರುದ್ಧದ ಎಫ್‌ಐಆರ್​ಗೆ ಹೈಕೋರ್ಟ್ ತಡೆ

ಜಾತಿ ತಾರತಮ್ಯ ಆರೋಪ : ಐಐಎಂ-ಬಿ ನಿರ್ದೇಕ ರಿಷಿಕೇಶ್ ಟಿ. ಕೃಷ್ಣನ್ ಹಾಗೂ ಏಳು ಮಂದಿಯ ವಿರುದ್ಧದ ಎಫ್‌ಐಆರ್​ಗೆ ಹೈಕೋರ್ಟ್ ತಡೆ

ಬೆಂಗಳೂರು: ಉದ್ಯೋಗದ ಸ್ಥಳದಲ್ಲಿ ಪ್ರಾಧ್ಯಾಪಕರೊಬ್ಬರಿಗೆ ಜಾತಿ ಆಧರಿಸಿ ತಾರತಮ್ಯ ಮಾಡಿದ ಆರೋಪ ಸಂಬಂಧ ಬೆಂಗಳೂರಿನ ಭಾರತೀಯ ವ್ಯವಸ್ಥಾಬಂಧ ಸಂಸ್ಥೆ (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ. ಕೃಷ್ಣನ್ ಹಾಗೂ ಇತರೆ ಏಳು ಮಂದಿಯ ವಿರುದ್ಧ ಎಫ್‌ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಐಐಎಂಬಿ ಮಾರ್ಕೆಟಿಂಗ್​​​ ವಿಭಾಗದ ಪ್ರಾಧ್ಯಾಪಕ ಗೋಪಾಲ್​ ದಾಸ್​ ನೀಡಿದ ದೂರು ಆಧರಿಸಿ ಮೈಕೋ ಲೇಔಟ್​​ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಐಎಂಬಿ ನಿರ್ದೇಶಕ ರಿಷಿಕೇಶ್ ಟಿ. ಕೃಷ್ಣನ್​, ಡೀನ್ ದಿನೇಶ್ ಕುಮಾರ್ ಸೇರಿದಂತೆ ಎಂಟು ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್​ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿದೆ.

ಅರ್ಜಿ ಸಂಬಂಧ ಮೈಕೋ ಲೇಔಟ್ ಠಾಣಾ ಪೊಲೀಸರು ಮತ್ತು ದೂರುದಾರ ಗೋಪಾಲ್​​​​ ದಾಸ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಪರಿಶಿಷ್ಟ ಜಾತಿಗೆ ಸೇರಿದ ಐಐಎಂ-ಬಿ ಮಾರ್ಕೆಂಟಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಗೋಪಾಲ್ ದಾಸ್ 2024ರ ಡಿ.20ರಂದು ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಐಐಎಂಬಿ ನಿರ್ದೇಶಕ ರಿಷಿಕೇಶ್ ಕೃಷ್ಣನ್, ಡೀನ್ ದಿನೇಶ್ ಕುಮಾರ್ ಸೇರಿ ಐಐಎಂಬಿಯ ಒಟ್ಟು 8 ಮಂದಿ ಉದ್ದೇಶಪೂರ್ವಕವಾಗಿ ನನ್ನ ಜಾತಿಯನ್ನು ಪ್ರಚಾರ ಮಾಡುತ್ತಿದ್ದಾರೆ. ಕೆಲಸದ ವಾತಾವರಣದಲ್ಲಿ ಸಮಾನ ಅವಕಾಶವನ್ನು ನೀಡದೆ ಜಾತಿ ಭೇದ-ವೈಷಮ್ಯ ಮಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಕೆಲಸದ ಸ್ಥಳದಲ್ಲಿ ಅಡಚಣೆ ಉಂಟು ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.

Category
ಕರಾವಳಿ ತರಂಗಿಣಿ