image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ತುಮಕೂರಿನ ಬಳಿ ವಿಮಾನ ನಿಲ್ದಾಣ ನಿರ್ಮಿಸುವ ಸಲುವಾಗಿ ಸರ್ಕಾರಕ್ಕೆ ಪ್ರಸ್ತಾವನೆ

ತುಮಕೂರಿನ ಬಳಿ ವಿಮಾನ ನಿಲ್ದಾಣ ನಿರ್ಮಿಸುವ ಸಲುವಾಗಿ ಸರ್ಕಾರಕ್ಕೆ ಪ್ರಸ್ತಾವನೆ

ತುಮಕೂರು: ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​​ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಆಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವರು, "ತುಮಕೂರಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ ಮಾಡಿದ್ದೇವೆ. ಜಿಲ್ಲಾಡಳಿತ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ತುಮಕೂರು ರಾಜ್ಯದಲ್ಲಿ ಪ್ರತಿಷ್ಠಿತವಾದ ಜಿಲ್ಲೆ. ವಿಸ್ತೀರ್ಣದಲ್ಲಿ ತುಮಕೂರು ಮೂರನೇ ಸ್ಥಾನ ಪಡೆದುಕೊಂಡಿದೆ. 11 ವಿಧಾನಸಭಾ ಕ್ಷೇತ್ರಗಳು ತುಮಕೂರಿಗೆ ಬರುತ್ತದೆ. ಬೆಂಗಳೂರಿಗೆ ಹತ್ತಿರವಿರುವ ವೇಗವಾಗಿ ಬೆಳೆಯುವ ಪಟ್ಟಣ ತುಮಕೂರು" ಎಂದರು.

"ಮುಂದಿನ 10 ವರ್ಷದಲ್ಲಿ ಬೆಂಗಳೂರು ತುಮಕೂರಿಗೆ ಯಾವುದೇ ವ್ಯತ್ಯಾಸವಿರುದಿಲ್ಲ. ತುಮಕೂರು ಸಹ ಬೆಂಗಳೂರಿಗೆ ಹೊಂದುಕೊಂಡಂತೆ ಬೆಳವಣೆಗೆ ಆಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಈಗಾಗಲೇ ನಾನು ಮನವಿ ಮಾಡಿದ್ದೇನೆ. ವಿಮಾನ ನಿಲ್ದಾಣವನ್ನು ತುಮಕೂರಿನ ಆಸುಪಾಸಿನಲ್ಲಿ ಮಂಜೂರು ಮಾಡಲು ಕೇಳಿದ್ದೇನೆ" ಎಂದು ತಿಳಿಸಿದರು.

"ವಿಮಾನ ನಿಲ್ದಾಣಕ್ಕಾಗಿ ಎರಡು ಭಾಗದಲ್ಲಿ ಜಾಗ ಗುರುತಿಸಿದ್ದಾರೆ. ವಸಂತನರಸಾಪುರ ಹೊಂದಿಕೊಂಡಂತೆ ಸುಮಾರು 3 ಸಾವಿರ ಎಕರೆ ಭೂಮಿ ಮತ್ತು ಸೀಬಿ ದೇವಸ್ಥಾನ ಮಧುಗಿರಿ ಹಾಗೂ ಕೊರಟಗೆರೆವರೆಗೆ 4 ಸಾವಿರ ಎಕರೆ ಭೂಮಿ ನಕ್ಷೆ ಮಾಡಲಾಗಿದೆ. ಈ ಪ್ರಸ್ತಾವನೆ ಸರ್ಕಾರಕ್ಕೆ ಹೋಗಿದೆ. ನಾವು ಪಕ್ಷಾತೀತವಾಗಿ ಒತ್ತಾಯ ಮಾಡುತ್ತೇವೆ" ಎಂದು ಹೇಳಿದರು.

 

Category
ಕರಾವಳಿ ತರಂಗಿಣಿ