image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಸಂಧಾನ ಸಭೆ ವಿಫಲ : ಮುಷ್ಕರ ತೀವ್ರಗೊಳಿಸಲು ಲಾರಿ ಮಾಲೀಕರ ಸಂಘ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಸಂಧಾನ ಸಭೆ ವಿಫಲ : ಮುಷ್ಕರ ತೀವ್ರಗೊಳಿಸಲು ಲಾರಿ ಮಾಲೀಕರ ಸಂಘ ನಿರ್ಧಾರ

ಬೆಂಗಳೂರು: ಇಂಧನ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ನಡೆಸಿದ ಸಂಧಾನ ಸಭೆ ವಿಫಲವಾದ ಬಳಿಕ, ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಸುವುದಾಗಿ ಹಾಗೂ ಉಗ್ರ ಹೋರಾಟ ಮಾಡುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಮುಷ್ಕರ ಮುಂದುವರೆದಿದ್ದು, ರೈತರು, ವರ್ತಕರು ಹಾಗೂ ವಿವಿಧ ಉದ್ಯಮಗಳು ಸಂಕಷ್ಟಕ್ಕೀಡಾಗುವಂತಾಗಿದೆ‌. ತರಕಾರಿ, ಎಲ್‌ಪಿಜಿ ಗ್ಯಾಸ್‌, ಡೊಮೆಸ್ಟಿಕ್‌ ಗ್ಯಾಸ್‌, ದಿನಸಿ, ಜಲ್ಲಿ, ಮರಳು, ಕಬ್ಬಿಣ ಸೇರಿದಂತೆ ಅನೇಕ ಬಗೆಯ ಸರಕು - ಸಾಗಣೆಯಲ್ಲಿ ಈಗಾಗಲೇ ವ್ಯತ್ಯಯ ಆರಂಭವಾಗಿದೆ. ಮುಷ್ಕರ ಮತ್ತಷ್ಟು ತೀವ್ರಗೊಂಡರೆ ಹಣ್ಣು ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಲಭ್ಯತೆ, ಇಂಧನ ಪೂರೈಕೆ ಕೊರತೆ ಉಂಟಾಗುವ ಆತಂಕ ಎದುರಾಗಿದೆ.

ಇತ್ತ ಮುಷ್ಕರ ತೀವ್ರಗೊಳಿಸಲು ಯೋಜಿಸಿರುವ ಲಾರಿ ಮಾಲೀಕರ ಸಂಘ, ಇಂದು ಲಾರಿ ಹಾಗೂ ಗೂಡ್ಸ್ ವಾಹನಗಳ ಚಾಲಕರ ಜೊತೆ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನಿಸಲು ಸಿದ್ಧತೆ ನಡೆಸುತ್ತಿದೆ.

ಸಂಧಾನ ಸಭೆ ಬಳಿಕ ಮಾತನಾಡಿದ್ದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ, ''ಆರ್​​ಟಿಒ ಗಡಿ ಚೆಕ್ ಪೋಸ್ಟ್ ಬಗ್ಗೆ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಗೆ ಕಳಿಸಿ ಅಧ್ಯಯನ ಮಾಡ್ತೇವೆ ಅಂದಿದ್ದಾರೆ. ಸಿಎಂ ಜೊತೆ ಡಿಸೇಲ್ ದರ ಇಳಿಕೆ ಹಾಗೂ ಟೋಲ್ ಬಗ್ಗೆ ಬೇಡಿಕೆ ಈಡೇರಿಸುವ ಮಾತಾಡಿಲ್ಲ. ಹೀಗಾಗಿ, ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡುತ್ತೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಆಟೋ ರಿಕ್ಷಾದಂತೆ, ಕ್ಯಾಬ್​​ನಂತೆ ಲಾರಿ ಮಾಲೀಕರಿಗೆ ಬಾಡಿಗೆ ದರ ಫಿಕ್ಸ್ ಮಾಡಬೇಕು. ಡಿಸೇಲ್ ದರ ಎಷ್ಟಾದರೂ ಏರಿಸಿ ನಮಗೆ ಬಾಡಿಗೆ ದರ ನಿಗದಿ ಮಾಡಿ ಎಂದು ಮನವಿ ಮಾಡಿದ್ದೇವೆ. ಅದಕ್ಕೆ ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಮುಷ್ಕರ ವಾಪಸ್ ತೆಗೆದುಕೊಳ್ಳಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ನೇರವಾಗಿ ಹೇಳಿದ್ದೇವೆ'' ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ