image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ರೇಟರ್​​ ಬೆಂಗಳೂರು ಕಾಯ್ದೆ ವಾಪಸ್​​ : ವಿ ಸೋಮಣ್ಣ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ರೇಟರ್​​ ಬೆಂಗಳೂರು ಕಾಯ್ದೆ ವಾಪಸ್​​ : ವಿ ಸೋಮಣ್ಣ

ಬೆಂಗಳೂರು: "ಮುಂದಿನ ಸಲ ಕಾಂಗ್ರೆಸ್​​​​​​​​​ ಗೆಲ್ಲೋದಿಲ್ಲ, ಇವರ ನಂತರ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನಾವು ಬಂದ ನಂತರ ಈಗಿರುವ ಬಿಬಿಎಂಪಿಗೆ ಚುನಾವಣೆ ನಡೆಸುತ್ತೇವೆ" ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ರೇಟರ್​​ ಬೆಂಗಳೂರು ಕಾಯ್ದೆ ವಾಪಸ್​​ ಪಡೆಯುವ ಸುಳಿವು ಕೊಟ್ಟಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಟರ್​​​​ ಬೆಂಗಳೂರು ಕಾಯ್ದೆಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, "ಇಲ್ಲದಿರೋದನ್ನು ಇದೆ ಅಂತ ತೋರಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಗ್ರೇಟರ್​​ ಬೆಂಗಳೂರು ಕಾಯ್ದೆ ಮೂಲಕ ಬಿಬಿಎಂಪಿ ಚುನಾವಣೆ ಇನ್ನಷ್ಟು ವಿಳಂಬ ಮಾಡಲು ಹೊರಟಿದ್ದಾರೆ. ಇವರು ಬಂದ ನಂತರ ಕನಿಷ್ಠ ರಸ್ತೆ ಗುಂಡಿ ಮುಚ್ಚಿಲ್ಲ, ಅಭಿವೃದ್ಧಿ ಇಲ್ವೇ ಇಲ್ಲ. ಇದೆಲ್ಲ ಡಿಕೆಶಿ ನಿರ್ಧಾರಗಳು. ಅವರೇ ಈ ಕಾಯ್ದೆ ತರಲು ಹೊರಟಿರುವ ಬಾಸ್​​. ಮುಂದಿನ ಸಲ ಇವರು ಗೆಲ್ಲೋದಿಲ್ಲ, ಇವರ ನಂತರ ನಾವೇ ಮತ್ತೆ ಅಧಿಕಾರಕ್ಕೆ ಬರ್ತೇವೆ. ನಾವು ಬಂದ ನಂತರ ಈಗಿರುವ ಬಿಬಿಎಂಪಿಗೆ ಚುನಾವಣೆ ನಡೆಸ್ತೇವೆ" ಎಂದು ತಿಳಿಸಿದರು.

 

Category
ಕರಾವಳಿ ತರಂಗಿಣಿ