image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದಾಖಲೆಗಳಿಲ್ಲದಿದ್ದರೂ ಭಾರೀ ಪ್ರಮಾಣದ ನಗದು ಹೊಂದಿದ್ದರೆ ಅದು ಅಪರಾಧವಾಗುವುದಿಲ್ಲ : ಹೈಕೋರ್ಟ್‌

ದಾಖಲೆಗಳಿಲ್ಲದಿದ್ದರೂ ಭಾರೀ ಪ್ರಮಾಣದ ನಗದು ಹೊಂದಿದ್ದರೆ ಅದು ಅಪರಾಧವಾಗುವುದಿಲ್ಲ : ಹೈಕೋರ್ಟ್‌

ಬೆಂಗಳೂರು: ಕಳ್ಳತನ ಇಲ್ಲವೇ ಮೋಸದಿಂದ ಪಡೆದುಕೊಂಡಿರುವುದು ಸಾಬೀತಾಗದಿದ್ದಲ್ಲಿ ಅಧಿಕೃತ ದಾಖಲೆಗಳಿಲ್ಲದಿದ್ದರೂ ಭಾರೀ ಪ್ರಮಾಣದ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್‌(police) ಕಾಯಿದೆ ಸೆಕ್ಷನ್‌ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್‌(high court) ತಿಳಿಸಿದೆ.

ಕಳೆದ ಲೋಕಸಭಾ ಚುನಾವಣೆ(election) ವೇಳೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಚಳ್ಳಕರೆ ಚಕ್‌ಪೋಸ್ಟ್‌ನಲ್ಲಿ(check post) 8 ಲಕ್ಷದ 38 ಸಾವಿರ ರೂ ನಗದು ಪತ್ತೆಯಾದ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದುಕೋರಿ ಆಂಧ್ರ ಮೂಲದ ಆರ್‌.ಅಮರನಾಥ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಈ ರೀತಿಯ ಪ್ರಕರಣಗಳನ್ನು ಒಂದು ವೇಳೆ ಅಪರಾಧ ಎಂಬುದನ್ನು ಸಾಬೀತುಪಡಿಸಬೇಕಾದರೆ, ಆ ನಗದನ್ನು ಕಳವು ಮಾಡಿರುವುದು ಇಲ್ಲವೇ ವಂಚನೆ ಎಸಗುವ ಮೂಲಕ ಗಳಿಸಲಾಗಿದೆ ಎಂಬುದನ್ನು ಸಾಬೀತುಪಡಿಸಬೇಕಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಪೀಠ, ಕಾಯಿದೆಯ ಸೆಕ್ಷನ್‌ 98ರಡಿಯಲ್ಲಿ ಶಿಕ್ಷಾರ್ಹ ಅಪರಾಧವು ನಾನ್‌-ಕಾಗ್ನಿಜಬಲ್‌ ಅಪರಾಧವಾಗಿದೆ. 1973ರ ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 155(2) ರ ನಿಬಂಧನೆಗಳ ಪ್ರಕಾರ, ಪೊಲೀಸರು ನಾನ್‌-ಕಾಗ್ನಿಜೇಬಲ್‌(non cognizable) ಅಪರಾಧವನ್ನು ತನಿಖೆ ಮಾಡಲು ಪ್ರಯತ್ನಿಸಿದಾಗ, ಯಾವುದೇ ತನಿಖೆಯನ್ನು ಆರಂಭಿಸುವ ಮೊದಲು ಮ್ಯಾಜಿಸ್ಪ್ರೇಟ್‌ ಅವರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ಈ ಪ್ರಕರಣದಲ್ಲಿ ಪೂರ್ವಾನುಮತಿ ಪಡೆದಿಲ್ಲ ಎಂದು ಪೀಠ ತಿಳಿಸಿದೆ.

ಆರೋಪಪಟ್ಟಿ ಸೇರಿದಂತೆ ದಾಖಲೆಯಲ್ಲಿರುವ ವಸ್ತುಗಳು, ಅರ್ಜಿದಾರರ ಬಳಿ ದೊರೆತ ನಗದು ಕದ್ದ ಆಸ್ತಿ ಅಥವಾ ವಂಚನೆಯಿಂದ ಪಡೆಯಲಾಗಿದೆಯೇ ಎಂಬ ಬಗ್ಗೆ ಯಾವುದೇ ಸಮಂಜಸವಾದ ನಂಬಿಕೆ ಅಥವಾ ಅನುಮಾನವಿದೆ ಎಂದು ಸೂಚಿಸಲಾಗುವುದಿಲ್ಲ ಎಂದು ನ್ಯಾಯಾಲಯ(judicial court) ಹೇಳಿದೆ.

ಅಂತಹ ಯಾವುದೇ ಆರೋಪ ಅಥವಾ ಸಮಂಜಸವಾದ ಅನುಮಾನ ದಾಖಲೆಯಲ್ಲಿ ಇಲ್ಲದಿದ್ದರೆ, ಕಾಯ್ದೆಯ ಸೆಕ್ಷನ್‌ 98ರ ಅಡಿಯಲ್ಲಿ ಅಪರಾಧವನ್ನು ಸಾಬೀತುಪಡಿಸಲು ಅಗತ್ಯವಿರುವ ಅಂಶಗಳು ಸ್ಪಷ್ಟವಾಗಿಲ್ಲ. ಹಾಗಾಗಿ ಅರ್ಜಿದಾರರ ವಿರುದ್ಧ ವಿಚಾರಣೆಯನ್ನು ಮುಂದುವರಿಸಲು ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಹೇಳಿದೆ.

ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಳ್ಳಕೆರೆ ಪೊಲೀಸರು ದಾಖಲಿಸಿದ್ದ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ಪ್ರಕ್ರಿಯೆ ರದ್ದುಮಾಡಬೇಕು ಎಂದು ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿದಾರರ(petetioner) ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

Category
ಕರಾವಳಿ ತರಂಗಿಣಿ