image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ಜೂನ್​​ 1ರಿಂದ ನವೆಂಬರ್​ 1ರವರೆಗೆ ಹಗಲಿನ ರೈಲುಗಳು ರದ್ದು

ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ಜೂನ್​​ 1ರಿಂದ ನವೆಂಬರ್​ 1ರವರೆಗೆ ಹಗಲಿನ ರೈಲುಗಳು ರದ್ದು

ದಕ್ಷಿಣ ಕನ್ನಡ : ಸಕಲೇಶಪುರ-ಸುಬ್ರಹ್ಮಣ್ಯ ರೋಡ್​ ಸೆಕ್ಷನ್​ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್‌ಇ) ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ಜೂ.1ರಿಂದ ನ.1ರ ವರೆಗೆ ಸುಮಾರು 154 ದಿನಗಳ ಕಾಲ ಹಗಲು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಮೇ 31ರಿಂದ ನವೆಂಬರ್​​ 1ರವರೆಗೆ ಪ್ರತಿ ಶನಿವಾರ ಸಂಚರಿಸುವ ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ರದ್ದಾಗಲಿದೆ. ಭಾನುವಾರ ಸಂಚರಿಸುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ - ಯಶವಂತಪುರ ಸಾಪ್ತಾಹಿಕ ಎಕ್ಸ್​ಪ್ರೆಸ್ ರೈಲು ಜೂ.1ರಿಂದ ನ.2ರ ವರೆಗೆ ರದ್ದು.

ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ತ್ರೀ-ವೀಕ್ಲಿ ಎಕ್ಸ್‌ಪ್ರೆಸ್‌ ರೈಲು ಜೂ.1ರಿಂದ ಆ.30ರ ವರೆಗೆ ಬಂದ್​. ಜೂ.2ರಿಂದ ಆ.31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ರೈಲು ಸಂಖ್ಯೆ 16576 ಮಂಗಳೂರು-ಯಶವಂತಪುರ ತ್ರೀ-ವೀಕ್ಲಿ ಎಕ್ಸ್‌ಪ್ರೆಸ್‌ ರೈಲು ಸ್ಥಗಿತ.

ಜೂ.2ರಿಂದ ಅ.31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ನಂ.16515 ಯಶವಂತಪುರ-ಕಾರವಾರ ತ್ರೀ-ವಿಕ್ಲಿ ಎಕ್ಸ್‌ಪ್ರೆಸ್ ಹಾಗೂ ಜೂ.3ರಿಂದ ನ.1ರ ವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ರೈಲು ನಂ.16516 ಕಾರವಾರ-ಯಶವಂತಪುರ ತ್ರೀ-ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದುಗೊಳ್ಳಲಿದೆ.

Category
ಕರಾವಳಿ ತರಂಗಿಣಿ