ದಕ್ಷಿಣ ಕನ್ನಡ : ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಸೆಕ್ಷನ್ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್ಇ) ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ಜೂ.1ರಿಂದ ನ.1ರ ವರೆಗೆ ಸುಮಾರು 154 ದಿನಗಳ ಕಾಲ ಹಗಲು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.
ಮೇ 31ರಿಂದ ನವೆಂಬರ್ 1ರವರೆಗೆ ಪ್ರತಿ ಶನಿವಾರ ಸಂಚರಿಸುವ ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು ರದ್ದಾಗಲಿದೆ. ಭಾನುವಾರ ಸಂಚರಿಸುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ - ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಜೂ.1ರಿಂದ ನ.2ರ ವರೆಗೆ ರದ್ದು.
ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ತ್ರೀ-ವೀಕ್ಲಿ ಎಕ್ಸ್ಪ್ರೆಸ್ ರೈಲು ಜೂ.1ರಿಂದ ಆ.30ರ ವರೆಗೆ ಬಂದ್. ಜೂ.2ರಿಂದ ಆ.31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ರೈಲು ಸಂಖ್ಯೆ 16576 ಮಂಗಳೂರು-ಯಶವಂತಪುರ ತ್ರೀ-ವೀಕ್ಲಿ ಎಕ್ಸ್ಪ್ರೆಸ್ ರೈಲು ಸ್ಥಗಿತ.
ಜೂ.2ರಿಂದ ಅ.31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ನಂ.16515 ಯಶವಂತಪುರ-ಕಾರವಾರ ತ್ರೀ-ವಿಕ್ಲಿ ಎಕ್ಸ್ಪ್ರೆಸ್ ಹಾಗೂ ಜೂ.3ರಿಂದ ನ.1ರ ವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ರೈಲು ನಂ.16516 ಕಾರವಾರ-ಯಶವಂತಪುರ ತ್ರೀ-ವೀಕ್ಲಿ ಎಕ್ಸ್ಪ್ರೆಸ್ ರೈಲುಗಳ ಸಂಚಾರ ರದ್ದುಗೊಳ್ಳಲಿದೆ.