image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೊರೊನಾ ಭೀತಿ ಹಿನ್ನೆಲೆ ಮಾಸ್ಕ್‌ ಧರಿಸಿಕೊಂಡೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮತ್ರಿ ಸಿದ್ದರಾಮಯ್ಯ.

ಕೊರೊನಾ ಭೀತಿ ಹಿನ್ನೆಲೆ ಮಾಸ್ಕ್‌ ಧರಿಸಿಕೊಂಡೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮತ್ರಿ ಸಿದ್ದರಾಮಯ್ಯ.

ಮೈಸೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಸಿದ್ದರಾಮಯ್ಯ ಇಂದು ತಮ್ಮ ಮನೆಯಿಂದ ಹೊರ ಬರುವಾಗ ಮಾಸ್ಕ್‌ ಧರಿಸಿಕೊಂಡು ಬಂದರು. ಈ ವೇಳೆ, ತಮ್ಮನ್ನು ನೋಡಲು ಬಂದ ಜನರಿಂದ ಮಾಸ್ಕ್​ ಧರಿಸಿಯೇ ಅಹವಾಲು ಸ್ವೀಕರಿಸಿದರು. ಮೈಸೂರು ಪ್ರವಾಸದಲ್ಲಿರುವ ಸಿಎಂ, ಇಂದು ತಮ್ಮ ಎರಡೇ ದಿನದ ಕಾರ್ಯಕ್ರಮಗಳಲ್ಲಿ ಎರಡು ಕಾರ್ಯಕ್ರಮಳಲ್ಲಿ ಭಾಗಿಯಾಲಿದ್ದು, ಮಧ್ಯಾಹ್ನದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್‌ ಅಗಲಿದ್ದಾರೆ.

ಮೊದಲ ಸಲ ಮುಖ್ಯಮಂತ್ರಿಯಾಗಿದ್ದ ವೇಳೆ ಇಂದಿರಾ ಕ್ಯಾಂಟೀನ್​ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದ್ದೆ. 2017ರಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ, ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್​ಗಳು ಸೊರಗಿದ್ದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದಿದ್ದರಿಂದ ಕ್ಯಾಂಟೀನ್​ಗಳು ಜೀವ ಪಡೆದುಕೊಳ್ಳುತ್ತಿವೆ. ಈ ಭಾಗವಾಗಿ ಹಿನಕಲ್​​ನಲ್ಲೇ 8 ಇಂದಿರಾ ಕ್ಯಾಂಟೀನ್​ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೇ ಹೊಸದಾಗಿ ಇನ್ನೂ 184 ಕ್ಯಾಂಟೀನ್​ಗಳನ್ನು ಬೇರೆ ಬೇರೆಡೆ ಆರಂಭಿಸುತ್ತಿದ್ದೇವೆ ಎಂದರು.

Category
ಕರಾವಳಿ ತರಂಗಿಣಿ