image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಾರ್ವಜನಿಕರಿಗೆ ತೊಂದರೆ ಆದರೆ ಟೋಯಿಂಗ್ ಜಾರಿಗೊಳಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ

ಸಾರ್ವಜನಿಕರಿಗೆ ತೊಂದರೆ ಆದರೆ ಟೋಯಿಂಗ್ ಜಾರಿಗೊಳಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ

ಬೆಂಗಳೂರು: ವಾಹನಗಳ ಟೋಯಿಂಗ್​ನಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಜಾರಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಸ್ತೆ ಬದಿ ನಿಲ್ಲುವ ವಾಹನಗಳ ಟೋಯಿಂಗ್ ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ವಾಹನಗಳ ಟೋಯಿಂಗ್ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಈ ಹಿಂದೆ ನನ್ನ ಗಮನಕ್ಕೆ ತರಲಾಗಿದೆ. ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೋತೇವೆ. ಸಾರ್ವಜನಿಕರಿಗೆ ನಮ್ಮ ಕ್ರಮದಿಂದ ಒಳ್ಳೆಯದಾಗಬೇಕೇ ಹೊರತು ಕೆಟ್ಟದಾಗಬಾರದು ಎಂದರು.

 

Category
ಕರಾವಳಿ ತರಂಗಿಣಿ