image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ಮನವಿ

ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ಮನವಿ

ನವದೆಹಲಿ: ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. 'ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದೇನೆ. ಜತೆಗೆ, ದಸರಾ ಸಮಯದಲ್ಲಿ ಕೆಆರ್‌ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ' ಎಂದು ಕುಮಾರಸ್ವಾಮಿ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ. 'ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ ಕ್ರೀಡೆಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ' ಎಂದು ಅವರು ತಿಳಿಸಿದ್ದಾರೆ. 'ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ. ಜತೆಗೆ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚಿಸಿದ್ದೇನೆ' ಎಂದು ಎಚ್‌ಡಿಕೆ ಮಾಹಿತಿ ಹಂಚಿಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ