image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೃಷ್ಣಾ ಮೇಲ್ಡಂಡೆ ಯೋಜನೆಯಲ್ಲಿ ಭೂಮಿಗೆ ನೀರಾವರಿ ಜಮೀನಿಗೆ 40 ಲಕ್ಷ, ಒಣ ಭೂಮಿಗೆ 30 ಲಕ್ಷ ಪರಿಹಾರ!

ಕೃಷ್ಣಾ ಮೇಲ್ಡಂಡೆ ಯೋಜನೆಯಲ್ಲಿ ಭೂಮಿಗೆ ನೀರಾವರಿ ಜಮೀನಿಗೆ 40 ಲಕ್ಷ, ಒಣ ಭೂಮಿಗೆ 30 ಲಕ್ಷ ಪರಿಹಾರ!

ಬೆಂಗಳೂರು: ಕೃಷ್ಣಾ ಮೇಲ್ಡಂಡೆ ಯೋಜನೆ - 3 ಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ಹಾಗೂ ಒಣ ಭೂಮಿಗೆ ಎಕರೆಗೆ 30 ಲಕ್ಷ ಪರಿಹಾರ ನೀಡಲು ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ಹಾಗೂ ಒಣ ಭೂಮಿಗೆ 30 ಲಕ್ಷ ನೀಡಬೇಕು ಎಂಬುದು ರೈತರ ಬೇಡಿಕೆ ಆಗಿದೆ. ಹೀಗಿದ್ದರೂ ಸರ್ಕಾರದ ಪರಿಹಾರ ಮೊತ್ತಕ್ಕೆ ರೈತರು ಸಹಮತ ವ್ಯಕ್ತಪಡಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಕಾಲುವೆ ನಿರ್ಮಾಣಕ್ಕೆ, 51,000 ಎಕರೆ ಜಮೀನು ಬೇಕಾಗಿದೆ. ಇದಕ್ಕೆ ಪರಿಹಾರವಾಗಿ ಒಣ ಭೂಮಿಗೆ ಎಕರೆಗೆ 25 ಲಕ್ಷ ಹಾಗೂ ನೀರಾವರಿ ಭೂಮಿಗೆ 30 ಲಕ್ಷ ಪರಿಹಾರ ಕೊಡಲು ತೀರ್ಮಾನ ಮಾಡಲಾಗಿದೆ.

ಭೂಮಿ ಮುಳುಗಡೆ, ಕಾಲುವೆ, ಪುನರ್ವಸತಿಗೆ ಒಟ್ಟು 1,33,000 ಜಮೀನು ಅಗತ್ಯ ಇದೆ. ಯೋಜನೆಯಿಂದ 20 ಗ್ರಾಮಗಳು ಮುಳುಗಡೆ ಆಗಲಿದೆ‌. ಯೋಜನೆಗೆ ಒಟ್ಟು 70,000 ಕ್ಕೂ ಹೆಚ್ಚು ಕೋಟಿ ಖರ್ಚು ಆಗಲಿದೆ ಎಂದು ವಿವರಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ-3 ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾತನಾಡಿ, ಆಲಮಟ್ಟಿ ಡ್ಯಾಂ ನ್ನು 519.6 ಮೀಟರ್ 524.256 ಮೀಟರ್ ಎತ್ತರಕ್ಕೆ ಏರಿಸಲು ಟ್ರಿಬ್ಯೂನಲ್ ಅವಾರ್ಡ್ ಮಾಡಿದೆ. 75,000 ಕ್ಕೂ ಹೆಚ್ಚು ಎಕರೆ ಭೂಮಿ ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್ ನೀರಾವರಿ ಭೂಮಿಯ ಅಗತ್ಯ ಇದೆ. ಯೋಜನೆಯಿಂದ ರೈತರ ಭೂಮಿಗೆ ನೀರು ಸಿಗಲಿದೆ. ರೈತರಿಗೆ ಅನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಸಲಾಗಿದೆ ಎಂದು ವಿವರಿಸಿದರು. ಪರಿಹಾರ ಪ್ರಕ್ರಿಯೆ ಮುಂದಿನ ಮೂರು ಆರ್ಥಿಕ ವರ್ಷಗಳಲ್ಲಿ ಪೂರ್ಣಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Category
ಕರಾವಳಿ ತರಂಗಿಣಿ