ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉಲ್ಲೇಖಿತ (2) ರನ್ವಯ ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಿದೆ.