ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿಂದು ನೂತನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ. ಇಂಥಹ ಸಂದರ್ಭಗಳಲ್ಲಿ ಸಂಸ್ಥೆಯ ಲಾಭಕ್ಕಿಂತ ಜನರಿಗೆ ಅನುಕೂಲವಾಗುವುದು ಮುಖ್ಯ ಎಂದು ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಹೆಚ್ಚುವರಿಯಾಗಿ 2,300 ಬಸ್ ಗಳ ಸೇವೆ ನೀಡಲಾಗಿತ್ತು. ಇದೀಗ ಮತ್ತೆ 900 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.